ಜನ ಮನದ ನಾಡಿ ಮಿಡಿತ

Advertisement

ಶಿಮಂತೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರ ಸಭೆ

ಶಿಮಂತೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2022-23 ನೇ ಸಾಲಿನ ಸರ್ವ ಸದಸ್ಯರ ಸಭೆ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ನಡೆದಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಪದ್ಮಿನಿ ವಿಜಯಕುಮಾರ್ ಶೆಟ್ಟಿ ವಹಿಸಿದ್ರು. ಬಳಿಕ ಅವರು ಮಾತನಾಡಿ ಕೃಷಿ ಹಾಗೂ ಹೈನುಗಾರಿಕೆಗೆ ಪ್ರೋತ್ಸಾಹ ನೀಡಿ ಸಂಘದ ಯಶಸ್ವಿಗೆ ಸದಸ್ಯರು ಕಾರಣಕರ್ತರಾಗಿದ್ದು, ಈ ಬಾರಿ ಸಂಘದ ಸದಸ್ಯರಿಗೆ ಲಾಭದ ಅಂಶದಲ್ಲಿ ಶೇ.21 ಡಿವಿಡೆಂಡ್ ನೀಡಲಾಗಿದೆ ಎಂದರು.

ಬಳಿಕ ದ.ಕ. ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸಂದೀಪ್ ಮಾತನಾಡಿ, ಕೃಷಿ ಹಾಗೂ ಹೈನುಗಾರಿಕೆ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವುದರ ಮುಖಾಂತರ ಹಾಲಿನ ಗುಣಮಟ್ಟ ಕಾಪಾಡಿಕೊಳ್ಳಬೇಕಾಗಿದೆ ಎಂದರು. ಈ ವೇಳೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಶೆಟ್ಟಿ ಲೆಕ್ಕಪತ್ರ ಮಂಡಿಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಡೈರಿಗೆ ಅತಿ ಹೆಚ್ಚು ಹಾಲು ಹಾಕಿದ ಹರಿಣಾಕ್ಷಿ (ಪ್ರ), ವಿಜಯ ಆರ್ ಶೆಟ್ಟಿ (ದ್ವಿ), ಪದ್ಮಿನಿ ವಿ. ಶೆಟ್ಟಿ(ತೃ), ಪ್ರಪುಲ್ಲಾ ಸಿ ಶೆಟ್ಟಿ (ಅತಿ ಹೆಚ್ಚು ಫ್ಯಾಟ್) ರವರಿಗೆ ಬಹುಮಾನ ನೀಡಲಾಯಿತು. ಬಳಿಕ ಕಳೆದ ಸಾಲಿನ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪೂರ್ವಿಕ ಎಚ್ ಶೆಟ್ಟಿ, ಹರ್ಷಿತಾ ಆರ್ ಶೆಟ್ಟಿ, ಉಮಾವತಿ ಯು. ಕೋಟ್ಯಾನ್ ರವರನ್ನು ಗೌರವಿಸಲಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!