ಜನ ಮನದ ನಾಡಿ ಮಿಡಿತ

Advertisement

ಚಾರುವಸಂತ ರಂಗ ತಾಲೀಮಿಗೆ ಚಾಲನೆ ನೀಡಿದ ಡಾ. ಎಂ.ಮೋಹನ ಆಳ್ವ

ಹಲವು ಅತ್ಯುತ್ತಮ ಕೃತಿಗಳನ್ನು ಕನ್ನಡ ನಾಡಿಗೆ ನೀಡಿದ ನಾಡೋಜ ಹಂ.ಪ.ನಾಗರಾಜಯ್ಯರವರು ನಮ್ಮ ಒಬ್ಬ ನಾಡಿನ ಶ್ರೇಷ್ಠ ಸಾಹಿತಿ.

ಹದಿನಾಲ್ಕು ಭಾಷೆಗಳಿಗೆ ಅನುವಾದಗೊಂಡಿರುವ ಅವರ ಪ್ರಸಿದ್ಧ ಕೃತಿಯಾಗಿರುವ ಚಾರುವಸಂತ ದೇಸೀ ಕಾವ್ಯವನ್ನು ರಂಗಕ್ಕೆ ತರಲು ನಮ್ಮ ಸಂಸ್ಥೆಗೆ ಬಹಳ ಹೆಮ್ಮೆ ಅನಿಸಿದೆ’ ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.


ಡಾ.ಎಂ.ಮೋಹನ ಆಳ್ವ ಅವರು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯಲಿರುವ ಚಾರುವಸಂತ ನಾಟಕದ ತಾಲೀಮನ್ನು ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೇಲ್ ನಲ್ಲಿ ನಾಟಕದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.


ಮುಖ್ಯ ಅತಿಥಿಗಳಾಗಿದ್ದ ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ ಮಾತನಾಡಿ ‘ ನನ್ನ ಗುರುಗಳ ಕೃತಿಯೊಂದು ರಂಗಕೃತಿಯಾಗುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ. ಹಲವು ಮಹತ್ವದ ರಂಗ ಪ್ರಯೋಗಗಳನ್ನು ರಂಗಕ್ಕೆ ತಂದಿರುವ ಡಾ.ಜೀವನ್ ರಾಂ ಸುಳ್ಯರ ನಿರ್ದೇಶನದಲ್ಲಿ ಈ ಚಾರುವಸಂತವು ಕನ್ನಡ ರಂಗಭೂಮಿಯಲ್ಲಿ ಹೊಸ ಸಂಚಲನ ಮೂಡಿಸಲಿ’ ಎಂದು ಶುಭ ಹಾರೈಸಿದರು.


ಕೃತಿಕಾರ ನಾಡೋಜ ಹಂ.ಪ.ನಾಗರಾಜಯ್ಯ ಚಾರುವಸಂತದ ರಂಗರೂಪವನ್ನು ಸಿದ್ಧ ಪಡಿಸಿದ ಸಾಹಿತಿ, ರಂಗಕರ್ಮಿ ಡಾ.ನಾ.ದಾ.ಶೆಟ್ಟಿ ಅವರ ಶ್ರಮವನ್ನು ಶ್ಲಾಘಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರ ಜೊತೆ ನೀನಾಸಂ ರಂಗಾಯಣಗಳಲ್ಲಿ ಅನುಭವ ಪಡೆದ ಕೆಲವು ಕಲಾವಿದರೂ ಪಾತ್ರವಹಿಸಲಿದ್ದು ಅಕ್ಟೋಬರ್ ಕೊನೆಯ ವಾರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ನಾಟಕದ ನಿರ್ದೇಶಕ ಜೀವನ್ ರಾಂ ಸುಳ್ಯ ತಿಳಿಸಿದರು.‌

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!