ಹಲವು ಅತ್ಯುತ್ತಮ ಕೃತಿಗಳನ್ನು ಕನ್ನಡ ನಾಡಿಗೆ ನೀಡಿದ ನಾಡೋಜ ಹಂ.ಪ.ನಾಗರಾಜಯ್ಯರವರು ನಮ್ಮ ಒಬ್ಬ ನಾಡಿನ ಶ್ರೇಷ್ಠ ಸಾಹಿತಿ.
ಹದಿನಾಲ್ಕು ಭಾಷೆಗಳಿಗೆ ಅನುವಾದಗೊಂಡಿರುವ ಅವರ ಪ್ರಸಿದ್ಧ ಕೃತಿಯಾಗಿರುವ ಚಾರುವಸಂತ ದೇಸೀ ಕಾವ್ಯವನ್ನು ರಂಗಕ್ಕೆ ತರಲು ನಮ್ಮ ಸಂಸ್ಥೆಗೆ ಬಹಳ ಹೆಮ್ಮೆ ಅನಿಸಿದೆ’ ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ಡಾ.ಎಂ.ಮೋಹನ ಆಳ್ವ ಅವರು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯಲಿರುವ ಚಾರುವಸಂತ ನಾಟಕದ ತಾಲೀಮನ್ನು ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೇಲ್ ನಲ್ಲಿ ನಾಟಕದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿದ್ದ ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ ಮಾತನಾಡಿ ‘ ನನ್ನ ಗುರುಗಳ ಕೃತಿಯೊಂದು ರಂಗಕೃತಿಯಾಗುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ. ಹಲವು ಮಹತ್ವದ ರಂಗ ಪ್ರಯೋಗಗಳನ್ನು ರಂಗಕ್ಕೆ ತಂದಿರುವ ಡಾ.ಜೀವನ್ ರಾಂ ಸುಳ್ಯರ ನಿರ್ದೇಶನದಲ್ಲಿ ಈ ಚಾರುವಸಂತವು ಕನ್ನಡ ರಂಗಭೂಮಿಯಲ್ಲಿ ಹೊಸ ಸಂಚಲನ ಮೂಡಿಸಲಿ’ ಎಂದು ಶುಭ ಹಾರೈಸಿದರು.
ಕೃತಿಕಾರ ನಾಡೋಜ ಹಂ.ಪ.ನಾಗರಾಜಯ್ಯ ಚಾರುವಸಂತದ ರಂಗರೂಪವನ್ನು ಸಿದ್ಧ ಪಡಿಸಿದ ಸಾಹಿತಿ, ರಂಗಕರ್ಮಿ ಡಾ.ನಾ.ದಾ.ಶೆಟ್ಟಿ ಅವರ ಶ್ರಮವನ್ನು ಶ್ಲಾಘಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರ ಜೊತೆ ನೀನಾಸಂ ರಂಗಾಯಣಗಳಲ್ಲಿ ಅನುಭವ ಪಡೆದ ಕೆಲವು ಕಲಾವಿದರೂ ಪಾತ್ರವಹಿಸಲಿದ್ದು ಅಕ್ಟೋಬರ್ ಕೊನೆಯ ವಾರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ನಾಟಕದ ನಿರ್ದೇಶಕ ಜೀವನ್ ರಾಂ ಸುಳ್ಯ ತಿಳಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…