ಕರಾವಳಿ

ಬಂಟ್ವಾಳ ತಾಲೂಕಿನ ಕೊರಗ ಸಮುದಾಯದ ಕುಂದುಕೊರತೆಗಳ ಸಭೆ ಬಿಸಿರೋಡಿನ ತಾ.ಪಂ.ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಾ.ಪಂ. ಪ್ರಭಾರ ಇ.ಒ.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದಿದೆ

2007 ರಲ್ಲಿ ಸಾಗುವಳಿ ಚೀಟಿ ನೀಡಿದ ಭೂಮಿಗಳ ಗಡಿಗುರುತು ಮಾಡಬೇಕು. ಭೂಮಿ ನೀಡಿದ ಇಲಾಖೆ ಪುನರ್ವಸತಿ ನೀಡುವ ಕಾರ್ಯಗಳು ಬಾಕಿಯಿದೆ. ಶೀಘ್ರವಾಗಿ ಪುನರ್ವಸತಿ ಕಾರ್ಯ ಆಗಬೇಕು. ಎಲ್ಲಾ ಮೂಲಭೂತ ಸೌಕರ್ಯಗಳನ್ನು ನೀಡಿದರೆ ಮಾತ್ರ ಸಮುದಾಯಕ್ಕೆ ಜೀವನ ಮಾಡಲು ಸಾಧ್ಯವಿದೆ ಎಂದು ಅವರು ತಿಳಿಸಿದರು.

ಭೂಮಿಯ ಮಾಲೀಕತ್ವವನ್ನು ನೀಡದೆ ನಮಗೆ ಯಾವುದೇ ‌ಸವಲತ್ತುಗಳನ್ನು ಪಡೆಯಲು ಸಾಧ್ಯವಿಲ್ಲ.
ಹಿರಿಯರು ಮರಣಹೊಂದಿರುವ ಅನೇಕ ಕೊರಗ ಕುಟುಂಬಗಳ ಭೂಮಿಯನ್ನು ಮನೆಯ ಇತರರ ಹೆಸರಿಗೆ ಖಾತೆ ಪರಿವರ್ತನೆ ಮಾಡುವ ಕಾರ್ಯ ಇಲಾಖೆಗಳಿಂದ ನಡೆದಿಲ್ಲ. ಇದರಿಂದ ಸರಕಾರದ ಯಾವುದೇ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸುಂದರ ಬೆಳುವಾಯಿ ಅಧಿಕಾರಿಗಳ ಗಮನಕ್ಕೆ ತಂದರು.

ಮೆಸ್ಕಾಂ ಮೀಟರ್ ರೀಡ್ ಮಾಡುವವರು ಮನೆಗೆ ಬರುವುದಿಲ್ಲ,ಬಿಲ್ ಕೂಡ ನೀಡುವುದಿಲ್ಲ, ಕೇಳಿದರೆ ನಾಯಿ ಇದೆ ಎಂದು ಹೇಳುತ್ತಾರೆ.ಆದರೆ ನಮ್ಮ ಮನೆಯಲ್ಲಿ ನಾಯಿಯೇ ಇಲ್ಲ ಎಂದು ಸುಂದರ ಅವರು ಮೆಸ್ಕಾಂ ಅಧಿಕಾರಿಯವರಲ್ಲಿ ದೂರಿದರು.ಈ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಮೆಸ್ಕಾಂ ಅವರು ಭರವಸೆ ನೀಡಿದರು.

ಹಿರಿಯರ ಜಮೀನನ್ನು ಬಲಾಢ್ಯರು ವಶಪಡಿಸಿಕೊಂಡಿರುವ ಬಗ್ಗೆ ಕಂದಾಯ ಇಲಾಖೆಗೆ ದೂರು ನೀಡಿದ್ದು, ಅ ಜಮೀನನ್ನು ನಮಗೆ ವಾಪಸು ತೆಗೆಸಿಕೊಡಿ ಎಂದು ಕಂದಾಯ ಇಲಾಖೆಗೆ ಅನೇಕ ಬಾರಿ ಮನವಿ ನೀಡುತ್ತಾ ಬಂದಿದ್ದೇನೆ,ಆದರೆ ಇಲಾಖೆ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಇದು ಅಧಿಕಾರಿಗಳ ಯಾವ ನ್ಯಾಯ , ಅಳಿವಿನಂಚಿಗೆ ಸರಿದಿರುವ ಸಮುದಾಯದ ಉಳಿಸುವುದಕ್ಕೆ ಅಧಿಕಾರಿಗಳು ನೀಡುವ ಕಾರ್ಯ ಇದೇನಾ? ಎಂದು ಪ್ರಶ್ನಿಸಿದರು.

ಕೇರಳ ಗಡಿಭಾಗದಿಂದ ಕರ್ನಾಟಕಕ್ಕೆ ಮದುವೆ ಆಗಿ ಬಂದ ವ್ಯಕ್ತಿಗಳಿಗೆ ಜಾತಿ ಸರ್ಟಿಫಿಕೇಟ್ ನೀಡಲು ಸಾಧ್ಯವಿದೆಯಾ? ಯಾವೆಲ್ಲಾ ದಾಖಲೆಗಳನ್ನು ನೀಡಬೇಕು ಎಂದು ಸುಂದರ ಕನ್ಯಾನ ಅಧಿಕಾರಿಗಳಲ್ಲಿ ಪ್ರಶ್ನಿಸಿದರು.

ಕೇರಳ ಗಡಿಭಾಗದ ಜಾತಿ ಸರ್ಟಿಫಿಕೇಟ್ ಹೊರತು ಪಡಿಸಿ ಉಳಿದ ಎಲ್ಲಾ ಸೌಕರ್ಯಗಳನ್ನು ನೀಡಲಾಗುತ್ತದೆ ಆದರೆ ಕರ್ನಾಟಕ ಮತ್ತು ಕೇರಳ ರಾಜ್ಯದ ಕೆಲವೊಂದು ನಿಯಮಗಳಿಗೆ ಅನುಸಾರವಾಗಿ ಜಾತಿ ಪ್ರಮಾಣ ಪತ್ರ ನೀಡಲು ಅಸಾಧ್ಯ ಎಂದು ಕಂದಾಯ ಅಧಿಕಾರಿ ನವೀನ್ ಬೆಂಜನಪದವು ತಿಳಿಸಿದರು

ಆದ್ಯತೆಯಲ್ಲಿ ಕೊರಗ ಸಮುದಾಯವನ್ನು ಅಧಿಕಾರಿಗಳು ಪರಿಗಣನೆ ಮಾಡಬೇಕು ,ಅಳಿವಿನಂಚಿಗೆ ಸಾಗುತ್ತಿರುವ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಸಭೆಯಲ್ಲಿ ತಿಳಿಸಿದರು.

ಬಿಸಿರೋಡಿನ ತಾ.ಪ‌ಂ.ಸಭಾಂಗಣದಲ್ಲಿ ತುಳು ಭಾಷೆ ಮೇಳೈಸಿತು .ಹೌದು ಕೊರಗರ ಕುಂದುಕೊರತೆಗಳ ಸಭೆಯಲ್ಲಿ ಬಹುಪಾಲು ಚರ್ಚೆ ತುಳುವಿನಲ್ಲಿ ನಡೆಯಿತು.
ಕೊರಗ ಜನಾಂಗದ ಬಹುತೇಕರು ತುಳುವಿನಲ್ಲಿ ಸಮಸ್ಯೆಯನ್ನು ಹೇಳಿಕೊಂಡಾಗ ಸ್ಪಂದಿಸಿದ ಅಧಿಕಾರಿಗಳು ಕೂಡ ಅವರಿಗೆ ಸರಿಯಾಗಿ ಮಾಹಿತಿ ಲಭ್ಯವಾಗಬೇಕು ಎಂಬ ನಿಟ್ಟಿನಲ್ಲಿ ತುಳುವಿನಲ್ಲಿಯೇ ಉತ್ತರಿಸಿದರು .
ಆರಂಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಅವರು ಕನ್ನಡ ದಲ್ಲಿ ಇಲಾಖೆಯ ಮಾಹಿತಿ ನೀಡಿದರು. ಅ ಬಳಿಕ ಸಮುದಾಯದವರು ತುಳುವಿನಲ್ಲಿ ಸಮಸ್ಯೆಗಳನ್ನು ಹೇಳಿಕೊಂಡಾಗ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಅವರು ಸಮಸ್ಯೆಗಳಿಗೆ ತುಳುವಿನಲ್ಲಿಯೇ ಸ್ಪಂದಿಸಿದರು.

ಕಂದಾಯ ಇಲಾಖೆಯ ಸಮಸ್ಯೆಗಳಿಗೂ ನವೀನ್ ಬೆಂಜನಪದವು ಅವರು ತುಳು ಭಾಷೆಯಲ್ಲಿ ಉತ್ತರಿಸಿ ತುಳು ಭಾಷೆಗೆ ಹೆಚ್ಚು ಒತ್ತು ನೀಡಿದರು.
ವೇದಿಕೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿ ರಾಜೇಶ್, ಸಮಾಜ ಕಲ್ಯಾಣ ಸುನೀತಾ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

1 day ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

1 day ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago