2007 ರಲ್ಲಿ ಸಾಗುವಳಿ ಚೀಟಿ ನೀಡಿದ ಭೂಮಿಗಳ ಗಡಿಗುರುತು ಮಾಡಬೇಕು. ಭೂಮಿ ನೀಡಿದ ಇಲಾಖೆ ಪುನರ್ವಸತಿ ನೀಡುವ ಕಾರ್ಯಗಳು ಬಾಕಿಯಿದೆ. ಶೀಘ್ರವಾಗಿ ಪುನರ್ವಸತಿ ಕಾರ್ಯ ಆಗಬೇಕು. ಎಲ್ಲಾ ಮೂಲಭೂತ ಸೌಕರ್ಯಗಳನ್ನು ನೀಡಿದರೆ ಮಾತ್ರ ಸಮುದಾಯಕ್ಕೆ ಜೀವನ ಮಾಡಲು ಸಾಧ್ಯವಿದೆ ಎಂದು ಅವರು ತಿಳಿಸಿದರು.
ಭೂಮಿಯ ಮಾಲೀಕತ್ವವನ್ನು ನೀಡದೆ ನಮಗೆ ಯಾವುದೇ ಸವಲತ್ತುಗಳನ್ನು ಪಡೆಯಲು ಸಾಧ್ಯವಿಲ್ಲ.
ಹಿರಿಯರು ಮರಣಹೊಂದಿರುವ ಅನೇಕ ಕೊರಗ ಕುಟುಂಬಗಳ ಭೂಮಿಯನ್ನು ಮನೆಯ ಇತರರ ಹೆಸರಿಗೆ ಖಾತೆ ಪರಿವರ್ತನೆ ಮಾಡುವ ಕಾರ್ಯ ಇಲಾಖೆಗಳಿಂದ ನಡೆದಿಲ್ಲ. ಇದರಿಂದ ಸರಕಾರದ ಯಾವುದೇ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸುಂದರ ಬೆಳುವಾಯಿ ಅಧಿಕಾರಿಗಳ ಗಮನಕ್ಕೆ ತಂದರು.
ಮೆಸ್ಕಾಂ ಮೀಟರ್ ರೀಡ್ ಮಾಡುವವರು ಮನೆಗೆ ಬರುವುದಿಲ್ಲ,ಬಿಲ್ ಕೂಡ ನೀಡುವುದಿಲ್ಲ, ಕೇಳಿದರೆ ನಾಯಿ ಇದೆ ಎಂದು ಹೇಳುತ್ತಾರೆ.ಆದರೆ ನಮ್ಮ ಮನೆಯಲ್ಲಿ ನಾಯಿಯೇ ಇಲ್ಲ ಎಂದು ಸುಂದರ ಅವರು ಮೆಸ್ಕಾಂ ಅಧಿಕಾರಿಯವರಲ್ಲಿ ದೂರಿದರು.ಈ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಮೆಸ್ಕಾಂ ಅವರು ಭರವಸೆ ನೀಡಿದರು.
ಹಿರಿಯರ ಜಮೀನನ್ನು ಬಲಾಢ್ಯರು ವಶಪಡಿಸಿಕೊಂಡಿರುವ ಬಗ್ಗೆ ಕಂದಾಯ ಇಲಾಖೆಗೆ ದೂರು ನೀಡಿದ್ದು, ಅ ಜಮೀನನ್ನು ನಮಗೆ ವಾಪಸು ತೆಗೆಸಿಕೊಡಿ ಎಂದು ಕಂದಾಯ ಇಲಾಖೆಗೆ ಅನೇಕ ಬಾರಿ ಮನವಿ ನೀಡುತ್ತಾ ಬಂದಿದ್ದೇನೆ,ಆದರೆ ಇಲಾಖೆ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಇದು ಅಧಿಕಾರಿಗಳ ಯಾವ ನ್ಯಾಯ , ಅಳಿವಿನಂಚಿಗೆ ಸರಿದಿರುವ ಸಮುದಾಯದ ಉಳಿಸುವುದಕ್ಕೆ ಅಧಿಕಾರಿಗಳು ನೀಡುವ ಕಾರ್ಯ ಇದೇನಾ? ಎಂದು ಪ್ರಶ್ನಿಸಿದರು.
ಕೇರಳ ಗಡಿಭಾಗದಿಂದ ಕರ್ನಾಟಕಕ್ಕೆ ಮದುವೆ ಆಗಿ ಬಂದ ವ್ಯಕ್ತಿಗಳಿಗೆ ಜಾತಿ ಸರ್ಟಿಫಿಕೇಟ್ ನೀಡಲು ಸಾಧ್ಯವಿದೆಯಾ? ಯಾವೆಲ್ಲಾ ದಾಖಲೆಗಳನ್ನು ನೀಡಬೇಕು ಎಂದು ಸುಂದರ ಕನ್ಯಾನ ಅಧಿಕಾರಿಗಳಲ್ಲಿ ಪ್ರಶ್ನಿಸಿದರು.
ಕೇರಳ ಗಡಿಭಾಗದ ಜಾತಿ ಸರ್ಟಿಫಿಕೇಟ್ ಹೊರತು ಪಡಿಸಿ ಉಳಿದ ಎಲ್ಲಾ ಸೌಕರ್ಯಗಳನ್ನು ನೀಡಲಾಗುತ್ತದೆ ಆದರೆ ಕರ್ನಾಟಕ ಮತ್ತು ಕೇರಳ ರಾಜ್ಯದ ಕೆಲವೊಂದು ನಿಯಮಗಳಿಗೆ ಅನುಸಾರವಾಗಿ ಜಾತಿ ಪ್ರಮಾಣ ಪತ್ರ ನೀಡಲು ಅಸಾಧ್ಯ ಎಂದು ಕಂದಾಯ ಅಧಿಕಾರಿ ನವೀನ್ ಬೆಂಜನಪದವು ತಿಳಿಸಿದರು
ಆದ್ಯತೆಯಲ್ಲಿ ಕೊರಗ ಸಮುದಾಯವನ್ನು ಅಧಿಕಾರಿಗಳು ಪರಿಗಣನೆ ಮಾಡಬೇಕು ,ಅಳಿವಿನಂಚಿಗೆ ಸಾಗುತ್ತಿರುವ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಸಭೆಯಲ್ಲಿ ತಿಳಿಸಿದರು.
ಬಿಸಿರೋಡಿನ ತಾ.ಪಂ.ಸಭಾಂಗಣದಲ್ಲಿ ತುಳು ಭಾಷೆ ಮೇಳೈಸಿತು .ಹೌದು ಕೊರಗರ ಕುಂದುಕೊರತೆಗಳ ಸಭೆಯಲ್ಲಿ ಬಹುಪಾಲು ಚರ್ಚೆ ತುಳುವಿನಲ್ಲಿ ನಡೆಯಿತು.
ಕೊರಗ ಜನಾಂಗದ ಬಹುತೇಕರು ತುಳುವಿನಲ್ಲಿ ಸಮಸ್ಯೆಯನ್ನು ಹೇಳಿಕೊಂಡಾಗ ಸ್ಪಂದಿಸಿದ ಅಧಿಕಾರಿಗಳು ಕೂಡ ಅವರಿಗೆ ಸರಿಯಾಗಿ ಮಾಹಿತಿ ಲಭ್ಯವಾಗಬೇಕು ಎಂಬ ನಿಟ್ಟಿನಲ್ಲಿ ತುಳುವಿನಲ್ಲಿಯೇ ಉತ್ತರಿಸಿದರು .
ಆರಂಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಅವರು ಕನ್ನಡ ದಲ್ಲಿ ಇಲಾಖೆಯ ಮಾಹಿತಿ ನೀಡಿದರು. ಅ ಬಳಿಕ ಸಮುದಾಯದವರು ತುಳುವಿನಲ್ಲಿ ಸಮಸ್ಯೆಗಳನ್ನು ಹೇಳಿಕೊಂಡಾಗ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಅವರು ಸಮಸ್ಯೆಗಳಿಗೆ ತುಳುವಿನಲ್ಲಿಯೇ ಸ್ಪಂದಿಸಿದರು.
ಕಂದಾಯ ಇಲಾಖೆಯ ಸಮಸ್ಯೆಗಳಿಗೂ ನವೀನ್ ಬೆಂಜನಪದವು ಅವರು ತುಳು ಭಾಷೆಯಲ್ಲಿ ಉತ್ತರಿಸಿ ತುಳು ಭಾಷೆಗೆ ಹೆಚ್ಚು ಒತ್ತು ನೀಡಿದರು.
ವೇದಿಕೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿ ರಾಜೇಶ್, ಸಮಾಜ ಕಲ್ಯಾಣ ಸುನೀತಾ ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…