ಕರಾವಳಿ

ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ವಾಗ್ಮಿ ಪ್ರೊ. ಕೃಷ್ಣೇಗೌಡ ಉಪನ್ಯಾಸ ;‘ಕಷ್ಟಪಟ್ಟು ಕಲಿಯಬೇಡಿ, ಕಲಿಕೆ ಇಷ್ಟಪಡಿ’̤̤̤̤̤

ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ನಡೆದ ‘ಆಗಮನ’ ಕಾರ್ಯಕ್ರಮದಲ್ಲಿ ಕೃಷ್ಣೇಗೌಡ ಅವರು ಉಪನ್ಯಾಸ ನೀಡಿದರು.


‘ಇವತ್ತು ಏನನ್ನಾದರೂ ಕಲಿತ್ತಿದ್ದೇನೆಯೇ?’ ಎಂದು ಪ್ರತಿದಿನ ಮಲಗುವ ಮೊದಲು ನಿಮ್ಮನ್ನು ನೀವೇ ಕೇಳಿಕೊಳ್ಳಿ’ ಎಂದು ಸಾಧಕರ ಮಾತನ್ನು ಉಲ್ಲೇಖಿಸಿದರು.
‘ಮಾಹಿತಿಯೇ ಜ್ಞಾನವಲ್ಲ. ಮಾಹಿತಿಯನ್ನು ಅರಗಿಸಿಕೊಂಡಾಗ ಮಾತ್ರ ಜ್ಞಾನ ಬರುತ್ತದೆ. ಅದನ್ನು ಸಮರ್ಪಕವಾಗಿ ನಿರ್ವಹಿಸುವುದೇ ವಿವೇಕ. ಆದರೆ, ಇಂದು ವಿವೇಕವು ಜ್ಞಾನದಲ್ಲಿ ಕಳೆದುಹೋಗಿದೆ. ಜ್ಞಾನವು ಮಾಹಿತಿಯಲ್ಲಿ ಕಳೆದುಹೋಗಿದೆ. ಇಂದು ಪರೀಕ್ಷೆ ಮುಗಿದರೆ, ವಿದ್ಯಾರ್ಥಿಗಳಿಗೆ ಮಾಹಿತಿಯು ಮರೆತುಹೋಗುತ್ತಿದೆ’ ಎಂದು ಕುಟುಕಿದರು.


‘ಬದುಕಿನಲ್ಲಿ ವಿಜ್ಞಾನದ ಮಾಪನಕ್ಕೆ ಸಿಗದೇ ಇರುವುದು ಸಾಕಷ್ಟು ಇದೆ. ಶಿಕ್ಷಣದ ಆಚೆಗೂ ಕಲಿಯಲು ಇದೆ. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಉತ್ತಮ ಶಿಕ್ಷಣ ನೀಡುತ್ತಿವೆ’ ಎಂದು ಅವರು ಶ್ಲಾಘಿಸಿದರು.
‘ಹಿಂದೆ ದೈಹಿಕ ಶಕ್ತಿ ಇದ್ದರೆ, ಅಧಿಕಾರ ಸಿಗುತ್ತಿತ್ತು. ಬಳಿಕ ಸಂಪತ್ತು, ಅನಂತರ ಶಿಕ್ಷಣ ಆ ಬಳಿಕ ಉದ್ಯೋಗ ಬೇಕಾಯಿತು. ಈಗ ಜ್ಞಾನ ಮತ್ತು ಕೌಶಲದ ಕಾಲವಾಗಿದೆ ಸ್ಪರ್ಧಾತ್ಮಕ ಯುಗದಲ್ಲಿ ‘ನಾನು ಮಾತ್ರ ಉದ್ಧಾರ ಆಗಬೇಕು’ ಎಂಬ ಕ್ರೌರ್ಯ ಇದೆ. ಅದರಿಂದ ನಾವೆಲ್ಲ ಹೊರಬರಬೇಕು ‘ನನಗೆ ಎಲ್ಲ ಗೊತ್ತಿಲ್ಲ ಎನ್ನುವ ಜ್ಞಾನ ಇದೆ’ ಅದುವೇ ನನ್ನ ಜ್ಞಾನ ಎಂದು ತತ್ವಜ್ಞಾನಿ ಸಾಕ್ರೆಟಿಸ್ ಹೇಳಿದ್ದಾರೆ. ಅದಕ್ಕಾಗಿ ಅವರು ಜ್ಞಾನಿ ಆಗಿದ್ದರು ಎಂದರು.

ಕ್ರಿ.ಶ. 1900ರಲ್ಲಿ ದೇಶದಲ್ಲಿ ಶೇ 3ರಷ್ಟು ಅಕ್ಷರಸ್ಥರು ಇದ್ದರು. ಈಗಿನ ಪೀಳಿಗೆಯ ಯಾರೂ ಶಿಕ್ಷಣದಿಂದ ಹೊರಗುಳಿಯದಂತೆ ನೋಡಿಕೊಳ್ಳಲಾಗುತ್ತಿದೆ. ದೇಶದಲ್ಲಿ ಶಿಕ್ಷಣ ಕ್ರಾಂತಿಯಾಗಿದೆ. ತಂತ್ರಜ್ಞಾನ ಕ್ರಾಂತಿ ಆಗುತ್ತಿದ್ದು, ಮಾಹಿತಿ ನಿಮ್ಮ ಅಂಗೈಯಲ್ಲಿದೆ. ಆದರೆ, ಮಾಹಿತಿ ಪಡೆಯುವುದೇ ಜ್ಞಾನ ಅಲ್ಲ.
‘ಜಾತಿ, ಧರ್ಮ, ಭೌಗೋಳಿಕ ಮೇರೆ ಎಲ್ಲವನ್ನೂ ಮೀರಿ ನಿಲ್ಲುವುದು ನಿಜವಾದ ಕಲೆ ಎಂದು ಖ್ಯಾತ ಶಹನಾಯಿ ವಾದಕ ಬಿಸ್ಮಿಲ್ಲಾ ಖಾನ್ ಹೇಳಿದ್ದರು. ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯ ಅವರು ಮಹಮ್ಮದ್ ರಫಿ ಅವರನ್ನು ದೇವರು ಎಂದಿದ್ದರು. ನಿಮ್ಮ ಸುತ್ತಲು ನಡೆಯುವ ದರಿದ್ರ ಚರ್ಚೆಗಳನ್ನೆಲ್ಲ ಮೀರಿ ಅವರೆಲ್ಲ ಮನುಷ್ಯರಾಗಿದ್ದಾರೆ ಎಂದರು.

ಪರಿಮಾಣಾತ್ಮಕ ಬೆಳವಣಿಗೆಗಿಂತ ಗುಣಾತ್ಮಕ ಬೆಳವಣಿಗೆ ಮುಖ್ಯ. ಆದರೆ, ನಮಗೆ ಯಾವುದು ಬದುಕಿನ ಮಾಪನ ಎಂಬುದೇ ಗೊತ್ತಿಲ್ಲ. ಒಳಿತನ್ನು ಗ್ರಹಿಸಿ ಗೌರವಿಸಿ.
‘ಜಗತ್ತಿನಲ್ಲಿ 4500ಭಾಷೆಗಳಿದ್ದು, ಅದರಲ್ಲಿನ ಶ್ರೇಷ್ಠ _30 ಭಾಷೆಗಳಲ್ಲಿ ಕನ್ನಡ ಒಂದು ಎಂದು ಅಮೆರಿಕಾದ ಭಾಷಾ ಅಧ್ಯಯನ ಕೇಂದ್ರವೊಂದು ಹೇಳಿದೆ. ಇಂಗ್ಲಿಷ್ ಅತಾರ್ತಿಕ ಭಾಷೆ. ಇಂಗ್ಲಿಷ್ ಅಕ್ಷರಗಳಿಗೆ ನಿರ್ದಿಷ್ಟ ಉಚ್ಛಾರಣೆ ಇಲ್ಲ’ ಎಂದ ಅವರು, ‘ಕರಾವಳಿ ಜನ ಮಾತನಾಡಿ ಮಾತನಾಡಿ ತುಳು ಭಾಷೆ ಉಳಿಸಿದರು’ ಎಂದು ಶ್ಲಾಘಿಸಿದರು.
ಇದಕ್ಕೂ ಮೊದಲು ನಡೆದ ಗೋಷ್ಠಿಯಲ್ಲಿ ‘ಉದ್ಯಮಶೀಲ ಪಯಣ’ದ ಬಗ್ಗೆ ಬರೋಡಾದ ಉದ್ಯಮಿ ಶಶಿಧರ್ ಬಿ. ಶೆಟ್ಟಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕಾಲೇಜಿನ ಪ್ರಾಂಶುಪಾಲ ಪೀಟರ್ ಫೆರ್ನಾಂಡಿಸ್, ವಿಧ್ಯಾರ್ಥಿ ಮುಖ್ಯ ಕ್ಷೇಮಪಾಲನಾಧಿಕಾರಿ ಪ್ರಣೀತ್, ಅಕಾಡೆಮಿಕ್ಸ್ ಡೀನ್ ಡಾ.ದಿವಾಕರ ಶೆಟ್ಟಿ, ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಸುಧೀರ್ ಶೆಟ್ಟಿ, ಇದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

11 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

11 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

11 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

16 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

16 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago