ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ ಸದ್ಯ ಪ್ರಾಥಮಿಕ ಹಂತದಲ್ಲಿದೆ ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇವರು ಮಂಗಳೂರಿನಲ್ಲಿ ಮಾತಾನಾಡಿ, ಮೈತ್ರಿ ಬಗ್ಗೆ ವರಿಷ್ಠರು ಚರ್ಚಿಸಿ, ನಮ್ಮನ್ನ ಮಾತನಾಡಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಅವರ ಉದ್ದೇಶವಾಗಿದೆ ಎಂದ್ರು. ಇನ್ನೂ ಇದೇ ವೇಳೆ ಬರಗಾಲದ ಬಗ್ಗೆ ಮಾತಾನಾಡಿ, ರಾಜ್ಯಸರಕಾರ ಮಾನ್ಸೂನ್ ಪೂರ್ವದ ಮಳೆ ವಿಫಲವಾದಾಗ ಎಚ್ಚೆತ್ತುಕೊಳ್ಳಬೇಕಿತ್ತು. ಆದ್ರೆ ಅವರು ಬರಗಾಲ ಘೋಷಣೆ ವಿಳಂಬ ಮಾಡಿದ್ದಾರೆ. ಇದಕ್ಕೆ ಕಾರಣ ಸರಕಾರ ವರದಿ ಪಡೆಯದೇ ಇರುವುದು. ಈಗ ಮುಂಗಾರು ಹೋಗಿದ್ದು, ರೈತರಿಗೆ ಸಹಾಯ ಮಾಡಲು ಸಾಧ್ಯವಿಲ್ಲ, ಕನಿಷ್ಠ ಬೆಳೆ ನಷ್ಟ ಪರಿಹಾರವಾದ್ರೂ ರಾಜ್ಯ ಸರಕಾರ ನೀಡಬೇಕು ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…