ಜನ ಮನದ ನಾಡಿ ಮಿಡಿತ

Advertisement

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ; ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಬಂಟ್ವಾಳ : ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಲೂಕಿನ ವಿವಧ ಕಡೆಗಳಲ್ಲಿ ಆಚರಿಸುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಸಮಾಜದ ಪ್ರಮುಖರ ಪೂರ್ವಭಾವಿ ಸಭೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಅವರ ನೇತೃತ್ವದಲ್ಲಿ ಸಭೆ ನಡೆಸಿದರು.


ಬಳಿಕ ಮಾತನಾಡಿದ ಅವರು ಗಣೇಶ್ ವಿಸರ್ಜನೆ ಮಾಡುವ ಸಂದರ್ಭದಲ್ಲಿ ನಡೆಯುವ ಮೆರವಣಿಗೆ ಇತರರಿಗೆ ತೊಂದರೆಯಾಗದಂತೆ ಮಾಡುವಂತೆ ಸಂಘಟಕರಿಗೆ ಸೂಚಿಸಿದರು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬೇಡಿ,ಮತ್ತು ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ ಅದಷ್ಟು ಶಿಸ್ತಿನಲ್ಲಿ ಮಾಡುವಂತೆ ತಿಳಿಸಿದರು.


ತಾಲೂಕಿನಲ್ಲಿ ಆಚರಿಸಲಾಗುವ ಪ್ರತಿಯೊಂದು ಕಡೆಗಳಲ್ಲೂ ತಾತ್ಕಾಲಿಕ ಸಿ.ಸಿ.ಕ್ಯಾಮರಾ ವನ್ನು ಅಳವಡಿಸುವಂತೆ ತಿಳಿಸಿದರು.
ಗಣೇಶನ ವಿಸರ್ಜನೆ ವೆರೆಗೆ ರಾತ್ರಿಪಾಳಿಯಲ್ಲಿ ಸ್ವಯಂ ಸೇವಕರು ಕಾಯುವಂತೆ ತಿಳಿಸಿದರು.


ಮೆರವಣಿಗೆ ವೇಳೆ ಡಿ.ಜೆ.ಗೆ ಅವಕಾಶ ನೀಡುವುದಿಲ್ಲ. ಸ್ಥಳೀಯ ಆಡಳಿತ, ಮೆಸ್ಕಾಂ, ಅಗ್ನಿಶಾಮಕ ದಳದವರಿಂದ ಅನುಮತಿ ಪಡೆದುಕೊಳ್ಳಿ ಎಂದು ತಿಳಿಸಿದರು.ಯಾವುದೇ ಗೊಂದಲಗಳಿಲ್ಲದೆ,ಶಾಂತಿಯುತವಾಗಿ ಕಾರ್ಯಕ್ರಮಗಳನ್ನು ನಡೆಸುವಂತೆ ಸಂಘಟಕರಲ್ಲಿ ಮನವಿ ಮಾಡಿದರು.


ಈ ಸಂದರ್ಭದಲ್ಲಿ ನಗರ ಪೋಲೀಸ್ ಠಾಣಾ ಎಸ್. ಐ.ರಾಮಕೃಷ್ಣ, ಟ್ರಾಫಿಕ್ ಎಸ್.ಐ.ಸುತೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!