ಜನ ಮನದ ನಾಡಿ ಮಿಡಿತ

Advertisement

ಕಬ್ಬಿಣದ ಜಾಕ್ ಮತ್ತು ಪೈಪ್ ಕದ್ದವ ಪೊಲೀಸರ ವಶಕ್ಕೆ

ಮೂಡಬಿದಿರೆ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ ಮತ್ತು ಪೈಪ್ ಮತ್ತು ಬೆಳುವಾಯಿಯಲ್ಲಿ ಮನೆ ನಿರ್ಮಾಣಕ್ಕೆ ತಂದು ಹಾಕಿರುವ ಶೀಟ್ ಒಟ್ಟು ರೂ 2,50,000 ಮೌಲ್ಯದ ಸೊತ್ತುಗಳನ್ನು ಕದ್ದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.


ಮೂಡುಬಿದಿರೆ ತಾಲೂಕಿನ ತೋಡಾರು ನಿವಾಸಿ ಮೊಹಮ್ಮದ್ ಸಾಹಿಲ್ ಬಂಧಿತ ಆರೋಪಿ. ಕಳೆದ ಜೂನ್ ತಿಂಗಳಿನಲ್ಲಿ ಬೆಳುವಾಯಿಯಲ್ಲಿ ನಿರ್ಮಿಸಲು ತಂದು ಹಾಕಿರುವ ಶೀಟ್ ಗಳು ಮತ್ತು ಕೆಸರುಗದ್ದೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಕಬ್ಬಿಣದ ಜಾಕ್ ಮತ್ತು ಪೈಪ್ ಗಳು ಆಗಸ್ಟ್ ತಿಂಗಳಿನಲ್ಲಿ ಕಳ್ಳತನವಾಗಿತ್ತು.
ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ಧಾರ್ಥ ಮತ್ತು ದಿನೇಶ್ ಕುಮಾರ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ಅವರ ನಿರ್ದೇಶನದಲ್ಲಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಉಪ ನಿರೀಕ್ಷಕರಾದ ದಿವಾಕರ ರೈ ಮತ್ತು ಸಿದ್ದಪ್ಪ ನರನೂರ, ಸಿಬಂಧಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಖಿಲ್ ಅಹಮ್ಮದ್ ಮತ್ತು ನಾಗರಾಜ ಅವರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

error: Content is protected !!