ಜನ ಮನದ ನಾಡಿ ಮಿಡಿತ

Advertisement

ಕಬ್ಬಿಣದ ಜಾಕ್ ಮತ್ತು ಪೈಪ್ ಕದ್ದವ ಪೊಲೀಸರ ವಶಕ್ಕೆ

ಮೂಡಬಿದಿರೆ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ ಮತ್ತು ಪೈಪ್ ಮತ್ತು ಬೆಳುವಾಯಿಯಲ್ಲಿ ಮನೆ ನಿರ್ಮಾಣಕ್ಕೆ ತಂದು ಹಾಕಿರುವ ಶೀಟ್ ಒಟ್ಟು ರೂ 2,50,000 ಮೌಲ್ಯದ ಸೊತ್ತುಗಳನ್ನು ಕದ್ದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.


ಮೂಡುಬಿದಿರೆ ತಾಲೂಕಿನ ತೋಡಾರು ನಿವಾಸಿ ಮೊಹಮ್ಮದ್ ಸಾಹಿಲ್ ಬಂಧಿತ ಆರೋಪಿ. ಕಳೆದ ಜೂನ್ ತಿಂಗಳಿನಲ್ಲಿ ಬೆಳುವಾಯಿಯಲ್ಲಿ ನಿರ್ಮಿಸಲು ತಂದು ಹಾಕಿರುವ ಶೀಟ್ ಗಳು ಮತ್ತು ಕೆಸರುಗದ್ದೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಕಬ್ಬಿಣದ ಜಾಕ್ ಮತ್ತು ಪೈಪ್ ಗಳು ಆಗಸ್ಟ್ ತಿಂಗಳಿನಲ್ಲಿ ಕಳ್ಳತನವಾಗಿತ್ತು.
ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ಧಾರ್ಥ ಮತ್ತು ದಿನೇಶ್ ಕುಮಾರ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ಅವರ ನಿರ್ದೇಶನದಲ್ಲಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಉಪ ನಿರೀಕ್ಷಕರಾದ ದಿವಾಕರ ರೈ ಮತ್ತು ಸಿದ್ದಪ್ಪ ನರನೂರ, ಸಿಬಂಧಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಖಿಲ್ ಅಹಮ್ಮದ್ ಮತ್ತು ನಾಗರಾಜ ಅವರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!