ಜನ ಮನದ ನಾಡಿ ಮಿಡಿತ

Advertisement

ಕಬ್ಬಿಣದ ಜಾಕ್ ಮತ್ತು ಪೈಪ್ ಕದ್ದವ ಪೊಲೀಸರ ವಶಕ್ಕೆ

ಮೂಡಬಿದಿರೆ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ ಮತ್ತು ಪೈಪ್ ಮತ್ತು ಬೆಳುವಾಯಿಯಲ್ಲಿ ಮನೆ ನಿರ್ಮಾಣಕ್ಕೆ ತಂದು ಹಾಕಿರುವ ಶೀಟ್ ಒಟ್ಟು ರೂ 2,50,000 ಮೌಲ್ಯದ ಸೊತ್ತುಗಳನ್ನು ಕದ್ದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.


ಮೂಡುಬಿದಿರೆ ತಾಲೂಕಿನ ತೋಡಾರು ನಿವಾಸಿ ಮೊಹಮ್ಮದ್ ಸಾಹಿಲ್ ಬಂಧಿತ ಆರೋಪಿ. ಕಳೆದ ಜೂನ್ ತಿಂಗಳಿನಲ್ಲಿ ಬೆಳುವಾಯಿಯಲ್ಲಿ ನಿರ್ಮಿಸಲು ತಂದು ಹಾಕಿರುವ ಶೀಟ್ ಗಳು ಮತ್ತು ಕೆಸರುಗದ್ದೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಕಬ್ಬಿಣದ ಜಾಕ್ ಮತ್ತು ಪೈಪ್ ಗಳು ಆಗಸ್ಟ್ ತಿಂಗಳಿನಲ್ಲಿ ಕಳ್ಳತನವಾಗಿತ್ತು.
ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ಧಾರ್ಥ ಮತ್ತು ದಿನೇಶ್ ಕುಮಾರ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ಅವರ ನಿರ್ದೇಶನದಲ್ಲಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಉಪ ನಿರೀಕ್ಷಕರಾದ ದಿವಾಕರ ರೈ ಮತ್ತು ಸಿದ್ದಪ್ಪ ನರನೂರ, ಸಿಬಂಧಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಖಿಲ್ ಅಹಮ್ಮದ್ ಮತ್ತು ನಾಗರಾಜ ಅವರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!