ಮೂಡಬಿದಿರೆ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ ಮತ್ತು ಪೈಪ್ ಮತ್ತು ಬೆಳುವಾಯಿಯಲ್ಲಿ ಮನೆ ನಿರ್ಮಾಣಕ್ಕೆ ತಂದು ಹಾಕಿರುವ ಶೀಟ್ ಒಟ್ಟು ರೂ 2,50,000 ಮೌಲ್ಯದ ಸೊತ್ತುಗಳನ್ನು ಕದ್ದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಮೂಡುಬಿದಿರೆ ತಾಲೂಕಿನ ತೋಡಾರು ನಿವಾಸಿ ಮೊಹಮ್ಮದ್ ಸಾಹಿಲ್ ಬಂಧಿತ ಆರೋಪಿ. ಕಳೆದ ಜೂನ್ ತಿಂಗಳಿನಲ್ಲಿ ಬೆಳುವಾಯಿಯಲ್ಲಿ ನಿರ್ಮಿಸಲು ತಂದು ಹಾಕಿರುವ ಶೀಟ್ ಗಳು ಮತ್ತು ಕೆಸರುಗದ್ದೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಕಬ್ಬಿಣದ ಜಾಕ್ ಮತ್ತು ಪೈಪ್ ಗಳು ಆಗಸ್ಟ್ ತಿಂಗಳಿನಲ್ಲಿ ಕಳ್ಳತನವಾಗಿತ್ತು.
ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ಧಾರ್ಥ ಮತ್ತು ದಿನೇಶ್ ಕುಮಾರ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ಅವರ ನಿರ್ದೇಶನದಲ್ಲಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಉಪ ನಿರೀಕ್ಷಕರಾದ ದಿವಾಕರ ರೈ ಮತ್ತು ಸಿದ್ದಪ್ಪ ನರನೂರ, ಸಿಬಂಧಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಖಿಲ್ ಅಹಮ್ಮದ್ ಮತ್ತು ನಾಗರಾಜ ಅವರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…