ಮೂಡಬಿದಿರೆ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ ಮತ್ತು ಪೈಪ್ ಮತ್ತು ಬೆಳುವಾಯಿಯಲ್ಲಿ ಮನೆ ನಿರ್ಮಾಣಕ್ಕೆ ತಂದು ಹಾಕಿರುವ ಶೀಟ್ ಒಟ್ಟು ರೂ 2,50,000 ಮೌಲ್ಯದ ಸೊತ್ತುಗಳನ್ನು ಕದ್ದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಮೂಡುಬಿದಿರೆ ತಾಲೂಕಿನ ತೋಡಾರು ನಿವಾಸಿ ಮೊಹಮ್ಮದ್ ಸಾಹಿಲ್ ಬಂಧಿತ ಆರೋಪಿ. ಕಳೆದ ಜೂನ್ ತಿಂಗಳಿನಲ್ಲಿ ಬೆಳುವಾಯಿಯಲ್ಲಿ ನಿರ್ಮಿಸಲು ತಂದು ಹಾಕಿರುವ ಶೀಟ್ ಗಳು ಮತ್ತು ಕೆಸರುಗದ್ದೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸಲು ತಂದು ಹಾಕಿರುವ ಕಬ್ಬಿಣದ ಜಾಕ್ ಮತ್ತು ಪೈಪ್ ಗಳು ಆಗಸ್ಟ್ ತಿಂಗಳಿನಲ್ಲಿ ಕಳ್ಳತನವಾಗಿತ್ತು.
ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ಧಾರ್ಥ ಮತ್ತು ದಿನೇಶ್ ಕುಮಾರ್, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ಅವರ ನಿರ್ದೇಶನದಲ್ಲಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಉಪ ನಿರೀಕ್ಷಕರಾದ ದಿವಾಕರ ರೈ ಮತ್ತು ಸಿದ್ದಪ್ಪ ನರನೂರ, ಸಿಬಂಧಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಖಿಲ್ ಅಹಮ್ಮದ್ ಮತ್ತು ನಾಗರಾಜ ಅವರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…