ನಾಟಕ ಪ್ರದರ್ಶನದ ವೇಳೆ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ.
ಶರಣು ಬಾಗಲಕೋಟೆ (24) ಎಂಬ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದು, ವೃತ್ತಿಯಲ್ಲಿ ಪೋಸ್ಟ್ ಮ್ಯಾನ್ ಕೆಲಸ ನಿರ್ವಹಿಸುತ್ತಿದ್ದನು.
ಶರಣು ಕೊಟ್ಯಾಳ್ ‘ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ’ ನಾಟಕ ಪ್ರದರ್ಶನ ವೇಳೆ ಡ್ಯಾನ್ಸ್ ಮಾಡಲು ಮುಂದಾಗಿದ್ದು, ಈ ವೇಳೆ ವೇದಿಕೆಯ ಮೇಲೆಯೇ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾನೆ.
ಸಾವನ್ನಪ್ಪಿದ ಶರಣು ಕೊಟ್ಯಾಳ್ ಇತ್ತೀಚೆಗೆ ಪೋಸ್ಟ್ ಮ್ಯಾನ್ ಆಗಿ ನೇಮಕಗೊಂಡಿದ್ದ. ಗ್ರಾಮ ದೇವರ ಜಾತ್ರೆ ಹಿನ್ನೆಲೆ ಹಮ್ಮಿಕೊಳ್ಳಲಾಗಿದ್ದ ನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ. ತಾನು ಸಹ ನಾಟಕದಲ್ಲಿ ಡ್ಯಾನ್ಸ್ ಮಾಡಲು ವೇದಿಕೆ ಏರಿದ್ದ. ಈ ವೇಳೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದಿದ್ದಾನೆ.
ವೇದಿಕೆ ಕೆಳಗೆ ಕುಳಿತು ನಾಟಕ ನೋಡುತ್ತಿದ್ದ ಗ್ರಾಮಸ್ಥರಲ್ಲೂ ಆತಂಕ ಸೃಷ್ಟಿಸಿದೆ.
ಇನ್ನು ಶರಣು ಕೊಟ್ಯಾಳ್ಗೆ ಹೃದಯಾಘಾತವಾಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…