ನಾಟಕ ಪ್ರದರ್ಶನದ ವೇಳೆ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ.
ಶರಣು ಬಾಗಲಕೋಟೆ (24) ಎಂಬ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದು, ವೃತ್ತಿಯಲ್ಲಿ ಪೋಸ್ಟ್ ಮ್ಯಾನ್ ಕೆಲಸ ನಿರ್ವಹಿಸುತ್ತಿದ್ದನು.
ಶರಣು ಕೊಟ್ಯಾಳ್ ‘ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ’ ನಾಟಕ ಪ್ರದರ್ಶನ ವೇಳೆ ಡ್ಯಾನ್ಸ್ ಮಾಡಲು ಮುಂದಾಗಿದ್ದು, ಈ ವೇಳೆ ವೇದಿಕೆಯ ಮೇಲೆಯೇ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾನೆ.
ಸಾವನ್ನಪ್ಪಿದ ಶರಣು ಕೊಟ್ಯಾಳ್ ಇತ್ತೀಚೆಗೆ ಪೋಸ್ಟ್ ಮ್ಯಾನ್ ಆಗಿ ನೇಮಕಗೊಂಡಿದ್ದ. ಗ್ರಾಮ ದೇವರ ಜಾತ್ರೆ ಹಿನ್ನೆಲೆ ಹಮ್ಮಿಕೊಳ್ಳಲಾಗಿದ್ದ ನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ. ತಾನು ಸಹ ನಾಟಕದಲ್ಲಿ ಡ್ಯಾನ್ಸ್ ಮಾಡಲು ವೇದಿಕೆ ಏರಿದ್ದ. ಈ ವೇಳೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದಿದ್ದಾನೆ.
ವೇದಿಕೆ ಕೆಳಗೆ ಕುಳಿತು ನಾಟಕ ನೋಡುತ್ತಿದ್ದ ಗ್ರಾಮಸ್ಥರಲ್ಲೂ ಆತಂಕ ಸೃಷ್ಟಿಸಿದೆ.
ಇನ್ನು ಶರಣು ಕೊಟ್ಯಾಳ್ಗೆ ಹೃದಯಾಘಾತವಾಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್…
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬವು ಆ.15ರಂದು ಕನ್ನರ್ಪಾಡಿ ಶ್ರೀದೇವಿ…
ಮಾದಕ ದ್ರವ್ಯಗಳ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ…
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು…
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಫಿಲೋ ಆಟಿದ ಕೂಟ’ ಕಾರ್ಯಕ್ರಮವು ಕಾಲೇಜಿನ…
ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಉದ್ಯಮಿ ಧರ್ಮೇಂದ್ರ ಶೆಟ್ಟಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವ್ಯಾಪಾರ ಕ್ಷೇತ್ರದಲ್ಲಿ…