ಜನ ಮನದ ನಾಡಿ ಮಿಡಿತ

Advertisement

ಮೆಲ್ಕಾರ್: ನಿಲ್ಲಿಸಿದ್ದ ಲಾರಿ ಏಕಾಏಕಿ ಮುಂದೆ ಚಲಿಸಿ ಅಪಘಾತ; ಇಬ್ಬರಿಗೆ ಗಾಯ

ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಮೆಲ್ಕಾರ್ ಎಂಬಲ್ಲಿ ನಡೆದಿದೆ.

ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ (18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿಯೊಂದು ಮೆಲ್ಕಾರ್ ನಲ್ಲಿ ಅಪಘಾತಕ್ಕೆ ಕಾರಣವಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ಎಂಬಲ್ಲಿ ‌ಸರ್ವಿಸ್ ರಸ್ತೆಯಲ್ಲಿ ಮಧ್ಯಾಹ್ನ ಕೆ.ಎನ್.ಆರ್. ಸಿ. ಕಂಪೆನಿಗೆ ಸೇರಿದ ಲಾರಿಯ ಚಾಲಕ ರಸ್ತೆಯಲ್ಲಿ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್ ‌ಹಾಕದ ಕಾರಣ ಲಾರಿ ಮುಂದೆ ಚಲಿಸಿದ್ದು , ಅಲ್ಲಿಯೇ ಇದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಮುಂದೆ ಸಾಗಿದ ಲಾರಿ ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಗೆ ವಾಲಿ ನಿಂತಿದೆ.

ಡಿಕ್ಕಿಹೊಡೆದ ಪರಿಣಾಮ ಅವರಿಬ್ಬರೂ ರಸ್ತೆ ಬದಿಯಲ್ಲಿರುವ ನೀರು ಹೋಗುವ ಸಣ್ಣ ಕಣಿಗೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಆನಂದ ಪಾಸ್ವಾನ್ ರವರ ನಿರ್ಲಕ್ಷ್ಯವೇ ಕಾರಣ ಎಂದು ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!