ಜನ ಮನದ ನಾಡಿ ಮಿಡಿತ

Advertisement

ಮೆಲ್ಕಾರ್: ನಿಲ್ಲಿಸಿದ್ದ ಲಾರಿ ಏಕಾಏಕಿ ಮುಂದೆ ಚಲಿಸಿ ಅಪಘಾತ; ಇಬ್ಬರಿಗೆ ಗಾಯ

ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಮೆಲ್ಕಾರ್ ಎಂಬಲ್ಲಿ ನಡೆದಿದೆ.

ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ (18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿಯೊಂದು ಮೆಲ್ಕಾರ್ ನಲ್ಲಿ ಅಪಘಾತಕ್ಕೆ ಕಾರಣವಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ಎಂಬಲ್ಲಿ ‌ಸರ್ವಿಸ್ ರಸ್ತೆಯಲ್ಲಿ ಮಧ್ಯಾಹ್ನ ಕೆ.ಎನ್.ಆರ್. ಸಿ. ಕಂಪೆನಿಗೆ ಸೇರಿದ ಲಾರಿಯ ಚಾಲಕ ರಸ್ತೆಯಲ್ಲಿ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್ ‌ಹಾಕದ ಕಾರಣ ಲಾರಿ ಮುಂದೆ ಚಲಿಸಿದ್ದು , ಅಲ್ಲಿಯೇ ಇದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಮುಂದೆ ಸಾಗಿದ ಲಾರಿ ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಗೆ ವಾಲಿ ನಿಂತಿದೆ.

ಡಿಕ್ಕಿಹೊಡೆದ ಪರಿಣಾಮ ಅವರಿಬ್ಬರೂ ರಸ್ತೆ ಬದಿಯಲ್ಲಿರುವ ನೀರು ಹೋಗುವ ಸಣ್ಣ ಕಣಿಗೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಆನಂದ ಪಾಸ್ವಾನ್ ರವರ ನಿರ್ಲಕ್ಷ್ಯವೇ ಕಾರಣ ಎಂದು ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!