ಜನ ಮನದ ನಾಡಿ ಮಿಡಿತ

Advertisement

ಮೆಲ್ಕಾರ್: ನಿಲ್ಲಿಸಿದ್ದ ಲಾರಿ ಏಕಾಏಕಿ ಮುಂದೆ ಚಲಿಸಿ ಅಪಘಾತ; ಇಬ್ಬರಿಗೆ ಗಾಯ

ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಮೆಲ್ಕಾರ್ ಎಂಬಲ್ಲಿ ನಡೆದಿದೆ.

ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ (18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿಯೊಂದು ಮೆಲ್ಕಾರ್ ನಲ್ಲಿ ಅಪಘಾತಕ್ಕೆ ಕಾರಣವಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ಎಂಬಲ್ಲಿ ‌ಸರ್ವಿಸ್ ರಸ್ತೆಯಲ್ಲಿ ಮಧ್ಯಾಹ್ನ ಕೆ.ಎನ್.ಆರ್. ಸಿ. ಕಂಪೆನಿಗೆ ಸೇರಿದ ಲಾರಿಯ ಚಾಲಕ ರಸ್ತೆಯಲ್ಲಿ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್ ‌ಹಾಕದ ಕಾರಣ ಲಾರಿ ಮುಂದೆ ಚಲಿಸಿದ್ದು , ಅಲ್ಲಿಯೇ ಇದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಮುಂದೆ ಸಾಗಿದ ಲಾರಿ ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಗೆ ವಾಲಿ ನಿಂತಿದೆ.

ಡಿಕ್ಕಿಹೊಡೆದ ಪರಿಣಾಮ ಅವರಿಬ್ಬರೂ ರಸ್ತೆ ಬದಿಯಲ್ಲಿರುವ ನೀರು ಹೋಗುವ ಸಣ್ಣ ಕಣಿಗೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಆನಂದ ಪಾಸ್ವಾನ್ ರವರ ನಿರ್ಲಕ್ಷ್ಯವೇ ಕಾರಣ ಎಂದು ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!