ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಮೆಲ್ಕಾರ್ ಎಂಬಲ್ಲಿ ನಡೆದಿದೆ.
ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ (18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿಯೊಂದು ಮೆಲ್ಕಾರ್ ನಲ್ಲಿ ಅಪಘಾತಕ್ಕೆ ಕಾರಣವಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರ್ ಎಂಬಲ್ಲಿ ಸರ್ವಿಸ್ ರಸ್ತೆಯಲ್ಲಿ ಮಧ್ಯಾಹ್ನ ಕೆ.ಎನ್.ಆರ್. ಸಿ. ಕಂಪೆನಿಗೆ ಸೇರಿದ ಲಾರಿಯ ಚಾಲಕ ರಸ್ತೆಯಲ್ಲಿ ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್ ಹಾಕದ ಕಾರಣ ಲಾರಿ ಮುಂದೆ ಚಲಿಸಿದ್ದು , ಅಲ್ಲಿಯೇ ಇದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಮುಂದೆ ಸಾಗಿದ ಲಾರಿ ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಗೆ ವಾಲಿ ನಿಂತಿದೆ.
ಡಿಕ್ಕಿಹೊಡೆದ ಪರಿಣಾಮ ಅವರಿಬ್ಬರೂ ರಸ್ತೆ ಬದಿಯಲ್ಲಿರುವ ನೀರು ಹೋಗುವ ಸಣ್ಣ ಕಣಿಗೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಆನಂದ ಪಾಸ್ವಾನ್ ರವರ ನಿರ್ಲಕ್ಷ್ಯವೇ ಕಾರಣ ಎಂದು ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…