ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಬೆಳ್ತಂಗಡಿ: ಮನೆಯ ಆವರಣದಲ್ಲೇ ಕಳ್ಳತನವಾದ ಚಿನ್ನಾಭರಣ ಪತ್ತೆ

ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯದ ಮನೆಯೊಂದರ ನೆಲಮಾಳಿಗೆಯಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಕಳವಾಗಿರುವ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಿದ ಎರಡೇ ದಿನಗಳಲ್ಲಿ ದೂರುದಾರರ ಮನೆಯಂಗಳದಲ್ಲೇ ಕಳವಾದ ಎಲ್ಲ ಚಿನ್ನಾಭರಣ ಪತ್ತೆಯಾದ ಘಟನೆ ನಡೆದಿದೆ.

ಪ್ರಮೋದ್ ವಿ ಭಿಡೆ ಜುಲೈ 5 ರಿಂದ ತಮ್ಮ ಮನೆಯ ಸಿಮೆಂಟ್ ಪ್ಲಾಸ್ಟರಿಂಗ್ ಮತ್ತು ಪೇಂಟಿಂಗ್ ಕೆಲಸಕ್ಕೆ 10 ರಿಂದ 13 ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ಜುಲೈ 19 ರಂದು ಅವರು ತಮ್ಮ ಕೆಲಸ ಮುಗಿಸಿದ್ದರು. ಸೆಪ್ಟೆಂಬರ್ 12 ರಂದು ಪ್ರಮೋದ್ ಅವರ ಪತ್ನಿ 122 ಗ್ರಾಂ ತೂಕದ ಚಿನ್ನವನ್ನು ತೆಗೆದುಕೊಳ್ಳಲು ಸೆಲ್ಲಾರ್‌ಗೆ ಹೋಗಿದ್ದರು. ಸಮಾರಂಭವೊಂದಕ್ಕೆ ಧರಿಸುವ ಸಲುವಾಗಿ ಐದು ಲಕ್ಷ ರೂಪಾಯಿ ಮೌಲ್ಯದ ಅದು ಕಾಣೆಯಾಗಿದೆ. ಅದರಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಧರ್ಮಸ್ಥಳ ಠಾಣೆಯ ಪೊಲೀಸರು ಹಲವು ಮಂದಿಯ ವಿಚಾರಣೆ ನಡೆಸಿದ್ದು, ಕೆಲವು ಕಾರ್ಮಿಕರನ್ನು ಕರೆಯಿಸಿ ವಿಚಾರಣೆ ನಡೆಸಿದ್ದರು. ಇನ್ನು ಕೆಲವರು ಊರಿನಲ್ಲಿ ಇಲ್ಲದೇ ಇದ್ದು, ಅವರನ್ನು ಕೂಡ ಕರೆಯಿಸಿ, ವಿಚಾರಣೆ ನಡೆಸಲು ಸಿದ್ಧತೆಯನ್ನೂ ನಡೆಸಿಕೊಂಡಿದ್ದರು. ತನಿಖೆ ಚುರುಕುಗೊಳ್ಳುತ್ತಿದ್ದಂತೆ ಕಳವಾದ ಚಿನ್ನಾಭರಣ ಮನೆಯಂಗಳದಲ್ಲಿ ಕಂಡುಬಂದಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ ಕಳವು ಮಾಡಿದವರು ವೃತ್ತಿಪರ ಕಳ್ಳರಲ್ಲ ಎಂದು ಹೇಳಬಹುದು, ಕಣ್ಣಿಗೆ ಸಿಕ್ಕಿದ್ದನ್ನು ಯಥಾವತ್ ದೋಚಿರುವ ಸಾಧ್ಯತೆಯೇ ಹೆಚ್ಚಿರುವಂತೆ ಕಂಡುಬರುತ್ತಿದೆ ಚಿನ್ನ ಕದ್ದೊಯ್ದ ಕಳ್ಳರು ಪೊಲೀಸರ ವಿಚಾರಣೆಗೆ ಹೆದರಿ ಚಿನ್ನಾಭರಣವನ್ನು ಮರಳಿಸಿರಬಹುದು ಎಂದು ಶಂಕಿಸಲಾಗಿದೆ. ಮನೆಮಂದಿಗೆ ಚಿನ್ನ ಸಿಕ್ಕಿತಲ್ಲ ಎನ್ನುವ ಆಶಾಭಾವ, ಆದರೆ ಕೃತ್ಯ ನಡೆಸಿದವರಾರು ಎನ್ನುವ ಬಗ್ಗೆ ಮಂದುವರಿಸಬೇಕೆ? ಬೇಡವೇ? ಎನ್ನುವ ಪ್ರಶ್ನೆ ಪೊಲೀಸರಿಗೆ ಮೂಡಿದ್ದು, ಸದ್ಯ ವಿಚಾರಣೆಯನ್ನು ನಿಲ್ಲಿಸಿದ್ದಾರೆ. ಮನೆಮಂದಿ ವಿಚಾರಣೆ ಮುಂದುವರಿಸಲು ಆಗ್ರಹಿಸಿದರೆ ವಿಚಾರಣೆ ಮುಂದುವರಿಯುವ ಸಾಧ್ಯತೆಯೂ ಇದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!