ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯದ ಮನೆಯೊಂದರ ನೆಲಮಾಳಿಗೆಯಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಕಳವಾಗಿರುವ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಿದ ಎರಡೇ ದಿನಗಳಲ್ಲಿ ದೂರುದಾರರ ಮನೆಯಂಗಳದಲ್ಲೇ ಕಳವಾದ ಎಲ್ಲ ಚಿನ್ನಾಭರಣ ಪತ್ತೆಯಾದ ಘಟನೆ ನಡೆದಿದೆ.
ಪ್ರಮೋದ್ ವಿ ಭಿಡೆ ಜುಲೈ 5 ರಿಂದ ತಮ್ಮ ಮನೆಯ ಸಿಮೆಂಟ್ ಪ್ಲಾಸ್ಟರಿಂಗ್ ಮತ್ತು ಪೇಂಟಿಂಗ್ ಕೆಲಸಕ್ಕೆ 10 ರಿಂದ 13 ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ಜುಲೈ 19 ರಂದು ಅವರು ತಮ್ಮ ಕೆಲಸ ಮುಗಿಸಿದ್ದರು. ಸೆಪ್ಟೆಂಬರ್ 12 ರಂದು ಪ್ರಮೋದ್ ಅವರ ಪತ್ನಿ 122 ಗ್ರಾಂ ತೂಕದ ಚಿನ್ನವನ್ನು ತೆಗೆದುಕೊಳ್ಳಲು ಸೆಲ್ಲಾರ್ಗೆ ಹೋಗಿದ್ದರು. ಸಮಾರಂಭವೊಂದಕ್ಕೆ ಧರಿಸುವ ಸಲುವಾಗಿ ಐದು ಲಕ್ಷ ರೂಪಾಯಿ ಮೌಲ್ಯದ ಅದು ಕಾಣೆಯಾಗಿದೆ. ಅದರಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಧರ್ಮಸ್ಥಳ ಠಾಣೆಯ ಪೊಲೀಸರು ಹಲವು ಮಂದಿಯ ವಿಚಾರಣೆ ನಡೆಸಿದ್ದು, ಕೆಲವು ಕಾರ್ಮಿಕರನ್ನು ಕರೆಯಿಸಿ ವಿಚಾರಣೆ ನಡೆಸಿದ್ದರು. ಇನ್ನು ಕೆಲವರು ಊರಿನಲ್ಲಿ ಇಲ್ಲದೇ ಇದ್ದು, ಅವರನ್ನು ಕೂಡ ಕರೆಯಿಸಿ, ವಿಚಾರಣೆ ನಡೆಸಲು ಸಿದ್ಧತೆಯನ್ನೂ ನಡೆಸಿಕೊಂಡಿದ್ದರು. ತನಿಖೆ ಚುರುಕುಗೊಳ್ಳುತ್ತಿದ್ದಂತೆ ಕಳವಾದ ಚಿನ್ನಾಭರಣ ಮನೆಯಂಗಳದಲ್ಲಿ ಕಂಡುಬಂದಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ ಕಳವು ಮಾಡಿದವರು ವೃತ್ತಿಪರ ಕಳ್ಳರಲ್ಲ ಎಂದು ಹೇಳಬಹುದು, ಕಣ್ಣಿಗೆ ಸಿಕ್ಕಿದ್ದನ್ನು ಯಥಾವತ್ ದೋಚಿರುವ ಸಾಧ್ಯತೆಯೇ ಹೆಚ್ಚಿರುವಂತೆ ಕಂಡುಬರುತ್ತಿದೆ ಚಿನ್ನ ಕದ್ದೊಯ್ದ ಕಳ್ಳರು ಪೊಲೀಸರ ವಿಚಾರಣೆಗೆ ಹೆದರಿ ಚಿನ್ನಾಭರಣವನ್ನು ಮರಳಿಸಿರಬಹುದು ಎಂದು ಶಂಕಿಸಲಾಗಿದೆ. ಮನೆಮಂದಿಗೆ ಚಿನ್ನ ಸಿಕ್ಕಿತಲ್ಲ ಎನ್ನುವ ಆಶಾಭಾವ, ಆದರೆ ಕೃತ್ಯ ನಡೆಸಿದವರಾರು ಎನ್ನುವ ಬಗ್ಗೆ ಮಂದುವರಿಸಬೇಕೆ? ಬೇಡವೇ? ಎನ್ನುವ ಪ್ರಶ್ನೆ ಪೊಲೀಸರಿಗೆ ಮೂಡಿದ್ದು, ಸದ್ಯ ವಿಚಾರಣೆಯನ್ನು ನಿಲ್ಲಿಸಿದ್ದಾರೆ. ಮನೆಮಂದಿ ವಿಚಾರಣೆ ಮುಂದುವರಿಸಲು ಆಗ್ರಹಿಸಿದರೆ ವಿಚಾರಣೆ ಮುಂದುವರಿಯುವ ಸಾಧ್ಯತೆಯೂ ಇದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…