ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯದ ಮನೆಯೊಂದರ ನೆಲಮಾಳಿಗೆಯಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಕಳವಾಗಿರುವ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಿದ ಎರಡೇ ದಿನಗಳಲ್ಲಿ ದೂರುದಾರರ ಮನೆಯಂಗಳದಲ್ಲೇ ಕಳವಾದ ಎಲ್ಲ ಚಿನ್ನಾಭರಣ ಪತ್ತೆಯಾದ ಘಟನೆ ನಡೆದಿದೆ.
ಪ್ರಮೋದ್ ವಿ ಭಿಡೆ ಜುಲೈ 5 ರಿಂದ ತಮ್ಮ ಮನೆಯ ಸಿಮೆಂಟ್ ಪ್ಲಾಸ್ಟರಿಂಗ್ ಮತ್ತು ಪೇಂಟಿಂಗ್ ಕೆಲಸಕ್ಕೆ 10 ರಿಂದ 13 ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ಜುಲೈ 19 ರಂದು ಅವರು ತಮ್ಮ ಕೆಲಸ ಮುಗಿಸಿದ್ದರು. ಸೆಪ್ಟೆಂಬರ್ 12 ರಂದು ಪ್ರಮೋದ್ ಅವರ ಪತ್ನಿ 122 ಗ್ರಾಂ ತೂಕದ ಚಿನ್ನವನ್ನು ತೆಗೆದುಕೊಳ್ಳಲು ಸೆಲ್ಲಾರ್ಗೆ ಹೋಗಿದ್ದರು. ಸಮಾರಂಭವೊಂದಕ್ಕೆ ಧರಿಸುವ ಸಲುವಾಗಿ ಐದು ಲಕ್ಷ ರೂಪಾಯಿ ಮೌಲ್ಯದ ಅದು ಕಾಣೆಯಾಗಿದೆ. ಅದರಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಧರ್ಮಸ್ಥಳ ಠಾಣೆಯ ಪೊಲೀಸರು ಹಲವು ಮಂದಿಯ ವಿಚಾರಣೆ ನಡೆಸಿದ್ದು, ಕೆಲವು ಕಾರ್ಮಿಕರನ್ನು ಕರೆಯಿಸಿ ವಿಚಾರಣೆ ನಡೆಸಿದ್ದರು. ಇನ್ನು ಕೆಲವರು ಊರಿನಲ್ಲಿ ಇಲ್ಲದೇ ಇದ್ದು, ಅವರನ್ನು ಕೂಡ ಕರೆಯಿಸಿ, ವಿಚಾರಣೆ ನಡೆಸಲು ಸಿದ್ಧತೆಯನ್ನೂ ನಡೆಸಿಕೊಂಡಿದ್ದರು. ತನಿಖೆ ಚುರುಕುಗೊಳ್ಳುತ್ತಿದ್ದಂತೆ ಕಳವಾದ ಚಿನ್ನಾಭರಣ ಮನೆಯಂಗಳದಲ್ಲಿ ಕಂಡುಬಂದಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ ಕಳವು ಮಾಡಿದವರು ವೃತ್ತಿಪರ ಕಳ್ಳರಲ್ಲ ಎಂದು ಹೇಳಬಹುದು, ಕಣ್ಣಿಗೆ ಸಿಕ್ಕಿದ್ದನ್ನು ಯಥಾವತ್ ದೋಚಿರುವ ಸಾಧ್ಯತೆಯೇ ಹೆಚ್ಚಿರುವಂತೆ ಕಂಡುಬರುತ್ತಿದೆ ಚಿನ್ನ ಕದ್ದೊಯ್ದ ಕಳ್ಳರು ಪೊಲೀಸರ ವಿಚಾರಣೆಗೆ ಹೆದರಿ ಚಿನ್ನಾಭರಣವನ್ನು ಮರಳಿಸಿರಬಹುದು ಎಂದು ಶಂಕಿಸಲಾಗಿದೆ. ಮನೆಮಂದಿಗೆ ಚಿನ್ನ ಸಿಕ್ಕಿತಲ್ಲ ಎನ್ನುವ ಆಶಾಭಾವ, ಆದರೆ ಕೃತ್ಯ ನಡೆಸಿದವರಾರು ಎನ್ನುವ ಬಗ್ಗೆ ಮಂದುವರಿಸಬೇಕೆ? ಬೇಡವೇ? ಎನ್ನುವ ಪ್ರಶ್ನೆ ಪೊಲೀಸರಿಗೆ ಮೂಡಿದ್ದು, ಸದ್ಯ ವಿಚಾರಣೆಯನ್ನು ನಿಲ್ಲಿಸಿದ್ದಾರೆ. ಮನೆಮಂದಿ ವಿಚಾರಣೆ ಮುಂದುವರಿಸಲು ಆಗ್ರಹಿಸಿದರೆ ವಿಚಾರಣೆ ಮುಂದುವರಿಯುವ ಸಾಧ್ಯತೆಯೂ ಇದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…