ನಾಗರಹಾವಿಗೆ ಡೀಸೆಲ್ ಎರಚಿದಾತ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ಕಳೆದ ವಾರ ನಾಗರ ಹಾವೊಂದು ಕಂಡುಬಂದಿದ್ದು, ಇದನ್ನು ಕಂಡ ಕಟ್ಟಡದ ಕಾವಲುಗಾರ ಉತ್ತರ ಕರ್ನಾಟಕ ಮೂಲದ ವ್ಯಕ್ತಿ ನಾಗರ ಹಾವಿಗೆ ಡೀಸೆಲ್ ಎರಚಿದ್ದಾನೆ.ಉರಿಯಿಂದ ನಾಗರ ಹಾವು ವಿಳವಿಳ ಅಂತ ಒದ್ದಾಟ ಅನುಭವಿಸಿತ್ತು. ಸ್ಥಳೀಯರು ಇದನ್ನ ಕಂಡು ಉರಗ ರಕ್ಷಕ ಯತೀಶ್ ಕಟೀಲು ಮಾಹಿತಿ ನೀಡಿದ್ರು. ಸ್ಥಳಕ್ಕೆ ಆಗಮಿಸಿದ ಯತೀಶ್ ಹಾವನ್ನು ರಕ್ಷಣೆ ಮಾಡಿ ಶ್ಯಾಂಪ್ ಮೂಲಕ ಮೈ ತೊಳೆದು ಸಹಜ ಸ್ಥಿತಿಗೆ ತಂದು ಅನಂತರ ಕಾಡಿಗೆ ಬಿಟ್ಟಿದ್ದಾರೆ.
ಆದ್ರೆ ಇಲ್ಲಿ ಅಚ್ಚರಿಯ ಸಂಗತಿಯೆಂದರೆ ಒಂದು ವಾರ ಕಳೆಯುವಷ್ಟರಲ್ಲಿ ಡೀಸೆಲ್ ಎರಚಿದ ಕಾರ್ಮಿಕ ಕೂಡ ನಾಗರ ಹಾವಿನಂತೆ ಮೈ ಉರಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…