ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ 100 ಅಡಿ ಪ್ರಪಾತಕ್ಕೆ ಲಾರಿಯೊಂದು ಬಿದ್ದಿದ್ದು, ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೇ ಲಾರಿ ಪಲ್ಟಿಯಾಗಿದ್ದು, ಪ್ರಪಾತಕ್ಕೆ ಬೀಳುತ್ತಿದ್ದಂತೆಯೇ ಲಾರಿ ಮರಕ್ಕೆ ಬಡಿದು ಸಿಕ್ಕಿಹಾಕಿಕೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಅಲ್ಲಿಗೆ ಆಗಮಿಸಿ ಚಾಲಕ ಮತ್ತು ಕ್ಲೀನರ್ನನ್ನು ರಕ್ಷಿಸಿದ್ದಾರೆ. ಈ ಮೂಲಕ ಪ್ರಾಣಸಂಕಟಕ್ಕೆ ಸಿಲುಕಿದ್ದ ಇಬ್ಬರ ಜೀವವನ್ನು ಮರ ಉಳಿಸಿದೆ.
ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ ಎಂದು ತಿಳಿದು ಬಂದಿದೆ. ಇನ್ನೂ ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…