ಜನ ಮನದ ನಾಡಿ ಮಿಡಿತ

Advertisement

ಅಕ್ಟೋಬರ್ 28 ಮತ್ತು 29 ರಂದು ನಡೆಯುವ ವಿಶ್ವ ಬಂಟರ ಕಾರ್ಯಕ್ರಮದ ಕರಪತ್ರ ಬಿಡುಗಡೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಇದೇ ಬರುವ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನ‌ದ ಪ್ರಯುಕ್ತ ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಕರಪತ್ರವನ್ನು ಸೆ. 15ರಂದು ಬೆಂಗಳೂರಿನ ಬಂಟರ ಸಂಘದಲ್ಲಿ ಇದರ ಅಧ್ಯಕ್ಷರಾದ ಮುರಳೀಧರ ಹೆಗ್ಡೆಯವರು ಬಿಡುಗಡೆ ಮಾಡಿದ್ದಾರೆ.


ಜಾಗತಿಕ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಕಾರ್ಯಕ್ರಮದ ವಿವರ ನೀಡಿ ಬೆಂಗಳೂರಿನ ಸಮಸ್ತ ಬಂಟರನ್ನು ಕಾರ್ಯಕ್ರಮಕ್ಕೆ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.
ಅಜಿತ್ ಶೆಟ್ಟಿ ಉಳ್ತುರು ಇವರು ಕಾರ್ಯಕ್ರಮ ನಿರ್ವಹಿಸಿದ್ದು, ಕ್ರೀಡಾಸಮಿತಿ ಸಂಚಾಲಕರಾದ ಗಿರೀಶ್ ಶೆಟ್ಟಿ ತೆಳ್ಳರ್ ಮತ್ತು ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಚಂದ್ರಹಾಸ ಶೆಟ್ಟಿಯವರು ಕಾರ್ಯಕ್ರಮದ ರೂಪುರೇಷೆ ನಿಯಮಗಳ ಬಗ್ಗೆ ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿಯವರನ್ನು ಬೆಂಗಳೂರು ಬಂಟರ ಸಂಘದ ವತಿಯಿಂದ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಒಕ್ಕೂಟದ ನಿರ್ದೇಶಕರಾದ ಅಶೋಕ್ ಶೆಟ್ಟಿ ಬೆಳ್ಳಾಡಿ, ಎಂ‌. ನಂದ್ಯಪ್ಪ ಶೆಟ್ಟಿ ಗೌ ಕಾರ್ಯದರ್ಶಿ ಬಂಟರ ಸಂಘ ಮೈಸೂರ್, ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಬಂಟರ ಸಂಘ ಬೆಂಗಳೂರು ಇದರ‌ ಮಾಜಿ ಅಧ್ಯಕ್ಷರಾದ ಉಪೇಂದ್ರ ಶೆಟ್ಟಿ, ಗೌರವ ಕಾರ್ಯದರ್ಶಿಗಳಾದ ಆನಂದರಾಮ‌‌ಶೆಟ್ಟಿ, ಉಪಾದ್ಯಕ್ಷರಾದ ಡಾ. ಜಗದೀಶ ಶೆಟ್ಟಿ, ಶ್ರೀಮತಿ ಗೀತಾಂಜಲಿ ಅಜಿಲ, ಖಜಾಂಚಿ ಅಮರನಾಥ‌ಶೆಟ್ಟಿ ಜೊತೆ ಕಾರ್ಯದರ್ಶಿ ಶ್ಯಾಮಲ ಶೆಟ್ಟಿ,ಕಾರ್ಯಕಾರಿ ಸಮಿತಿ ಸದಸ್ಯರಾದ ಸುದೀಪ ನೈಕ್, ಕೀರ್ತನ್ ಶೆಟ್ಟಿ, ನಿರಂಜನ್ ಶೆಟ್ಟಿ, ಜಯಶ್ರೀ ಸಿ ರೈ, ಸುಧಾಕರ ಶೆಟ್ಟಿ, ಸಂದೀಪ ಶೆಟ್ಟಿ, ಕಿರಣ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಚಂದ್ರಹಾಸ ರೈ,‌ ಮಾಜಿ ಉಪಾಧ್ಯಕ್ಷರಾದ ಬೋಜರಾಜ ಶೆಟ್ಟಿ ಕೊರ್ಗಿ, ‌ಮಾಜಿ‌ ಕಾರ್ಯದರ್ಶಿ ಮಧುಕರ ಶೆಟ್ಟಿ, ಹಾಗೂ ಬಂಟರ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!