ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ಮಾನವೀಯ ಕಾರ್ಯ; ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಗೆ ಧನಸಹಾಯದ ನೆರವು

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧಿಯ ಖರ್ಚಿಗಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಧನ ಸಹಾಯ ಮಾಡಿ, ಮಾನವೀಯತೆ ಮೆರೆದಿದ್ದಾರೆ.

ಠಾಣೆಯ ಕೆಲಸಕ್ಕಾಗಿ ಬರುತ್ತಿದ್ದ ವನಿತಾ ಎಂಬ ಮಹಿಳೆಗೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ನೇತೃತ್ವದಲ್ಲಿ ಸುಮಾರು 27,000 ಸಾವಿರ ನಗದು ಹಣವನ್ನು ನೀಡಿ, ಸಹಾಯ ಹಸ್ತ ಚಾಚಿದ್ದಾರೆ.‌ ಬಂಟ್ವಾಳ ಪೇಟೆ ನಿವಾಸಿಯಾಗಿರುವ ವನಿತ ಅವರು ತೀರಾ ಬಡತನದ ಕುಟುಂಬದಲ್ಲಿ ಜೀವನ ನಡೆಸುತ್ತಿದ್ದು, ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಶುಚಿತ್ವದ ಕೆಲಸ ಮಾಡುತ್ತಿದ್ದರು.


ಆದರೆ ವನಿತಾರವರು ಇತ್ತೀಚೆಗೆ ಮನೆಯ ಸಮೀಪ ಬಿದ್ದ ಪರಿಣಾಮ ಕೈ ಮೂಳೆ ಮುರಿತಕ್ಕೆ ಒಳಗಾಗಿ ಕೆಲಸಕ್ಕೆ ಬರಲು ಅಸಾಧ್ಯವಾಗಿತ್ತು.
ತೀರಾ ಬಡತನದಲ್ಲಿರುವ ವನಿತಾ ಅವರಿಗೆ ಕೆಲಸ ಮಾಡಿದರೆ ಮೂರು ಹೊತ್ತು ಊಟ ಎಂಬ ಪರಿಸ್ಥಿತಿ, ಹಾಗಾಗಿ ಕಳೆದ ಕೆಲವು ತಿಂಗಳ ಕಾಲ ದುಡಿಮೆ ಇಲ್ಲದೆ ಕಷ್ಟದ ಸ್ಥಿತಿಯಲ್ಲಿರುವ ವಿಚಾರ ಪೊಲೀಸರ ಗಮನಕ್ಕೆ ಬಂದಿತು.


ಇದೀಗ ಬಂಟ್ವಾಳ ಪೊಲೀಸರು ವನಿತಾ ಅವರ ಮನೆಯ ಖರ್ಚಿಗಾಗಿ ಠಾಣೆಯಲ್ಲಿ ಸಿಬ್ಬಂದಿಗಳಿಂದ ಒಟ್ಟುಗೂಡಿಸಿದ ನಗದು ಹಣವನ್ನು ಅವರಿಗೆ ಹಸ್ತಾಂತರ ಮಾಡಿ, ಮಾನವೀಯ ಕಾರ್ಯ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!