ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧಿಯ ಖರ್ಚಿಗಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಧನ ಸಹಾಯ ಮಾಡಿ, ಮಾನವೀಯತೆ ಮೆರೆದಿದ್ದಾರೆ.
ಠಾಣೆಯ ಕೆಲಸಕ್ಕಾಗಿ ಬರುತ್ತಿದ್ದ ವನಿತಾ ಎಂಬ ಮಹಿಳೆಗೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ನೇತೃತ್ವದಲ್ಲಿ ಸುಮಾರು 27,000 ಸಾವಿರ ನಗದು ಹಣವನ್ನು ನೀಡಿ, ಸಹಾಯ ಹಸ್ತ ಚಾಚಿದ್ದಾರೆ. ಬಂಟ್ವಾಳ ಪೇಟೆ ನಿವಾಸಿಯಾಗಿರುವ ವನಿತ ಅವರು ತೀರಾ ಬಡತನದ ಕುಟುಂಬದಲ್ಲಿ ಜೀವನ ನಡೆಸುತ್ತಿದ್ದು, ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಶುಚಿತ್ವದ ಕೆಲಸ ಮಾಡುತ್ತಿದ್ದರು.
ಆದರೆ ವನಿತಾರವರು ಇತ್ತೀಚೆಗೆ ಮನೆಯ ಸಮೀಪ ಬಿದ್ದ ಪರಿಣಾಮ ಕೈ ಮೂಳೆ ಮುರಿತಕ್ಕೆ ಒಳಗಾಗಿ ಕೆಲಸಕ್ಕೆ ಬರಲು ಅಸಾಧ್ಯವಾಗಿತ್ತು.
ತೀರಾ ಬಡತನದಲ್ಲಿರುವ ವನಿತಾ ಅವರಿಗೆ ಕೆಲಸ ಮಾಡಿದರೆ ಮೂರು ಹೊತ್ತು ಊಟ ಎಂಬ ಪರಿಸ್ಥಿತಿ, ಹಾಗಾಗಿ ಕಳೆದ ಕೆಲವು ತಿಂಗಳ ಕಾಲ ದುಡಿಮೆ ಇಲ್ಲದೆ ಕಷ್ಟದ ಸ್ಥಿತಿಯಲ್ಲಿರುವ ವಿಚಾರ ಪೊಲೀಸರ ಗಮನಕ್ಕೆ ಬಂದಿತು.
ಇದೀಗ ಬಂಟ್ವಾಳ ಪೊಲೀಸರು ವನಿತಾ ಅವರ ಮನೆಯ ಖರ್ಚಿಗಾಗಿ ಠಾಣೆಯಲ್ಲಿ ಸಿಬ್ಬಂದಿಗಳಿಂದ ಒಟ್ಟುಗೂಡಿಸಿದ ನಗದು ಹಣವನ್ನು ಅವರಿಗೆ ಹಸ್ತಾಂತರ ಮಾಡಿ, ಮಾನವೀಯ ಕಾರ್ಯ ಮಾಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…