ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧಿಯ ಖರ್ಚಿಗಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಧನ ಸಹಾಯ ಮಾಡಿ, ಮಾನವೀಯತೆ ಮೆರೆದಿದ್ದಾರೆ.
ಠಾಣೆಯ ಕೆಲಸಕ್ಕಾಗಿ ಬರುತ್ತಿದ್ದ ವನಿತಾ ಎಂಬ ಮಹಿಳೆಗೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ನೇತೃತ್ವದಲ್ಲಿ ಸುಮಾರು 27,000 ಸಾವಿರ ನಗದು ಹಣವನ್ನು ನೀಡಿ, ಸಹಾಯ ಹಸ್ತ ಚಾಚಿದ್ದಾರೆ. ಬಂಟ್ವಾಳ ಪೇಟೆ ನಿವಾಸಿಯಾಗಿರುವ ವನಿತ ಅವರು ತೀರಾ ಬಡತನದ ಕುಟುಂಬದಲ್ಲಿ ಜೀವನ ನಡೆಸುತ್ತಿದ್ದು, ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಶುಚಿತ್ವದ ಕೆಲಸ ಮಾಡುತ್ತಿದ್ದರು.
ಆದರೆ ವನಿತಾರವರು ಇತ್ತೀಚೆಗೆ ಮನೆಯ ಸಮೀಪ ಬಿದ್ದ ಪರಿಣಾಮ ಕೈ ಮೂಳೆ ಮುರಿತಕ್ಕೆ ಒಳಗಾಗಿ ಕೆಲಸಕ್ಕೆ ಬರಲು ಅಸಾಧ್ಯವಾಗಿತ್ತು.
ತೀರಾ ಬಡತನದಲ್ಲಿರುವ ವನಿತಾ ಅವರಿಗೆ ಕೆಲಸ ಮಾಡಿದರೆ ಮೂರು ಹೊತ್ತು ಊಟ ಎಂಬ ಪರಿಸ್ಥಿತಿ, ಹಾಗಾಗಿ ಕಳೆದ ಕೆಲವು ತಿಂಗಳ ಕಾಲ ದುಡಿಮೆ ಇಲ್ಲದೆ ಕಷ್ಟದ ಸ್ಥಿತಿಯಲ್ಲಿರುವ ವಿಚಾರ ಪೊಲೀಸರ ಗಮನಕ್ಕೆ ಬಂದಿತು.
ಇದೀಗ ಬಂಟ್ವಾಳ ಪೊಲೀಸರು ವನಿತಾ ಅವರ ಮನೆಯ ಖರ್ಚಿಗಾಗಿ ಠಾಣೆಯಲ್ಲಿ ಸಿಬ್ಬಂದಿಗಳಿಂದ ಒಟ್ಟುಗೂಡಿಸಿದ ನಗದು ಹಣವನ್ನು ಅವರಿಗೆ ಹಸ್ತಾಂತರ ಮಾಡಿ, ಮಾನವೀಯ ಕಾರ್ಯ ಮಾಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…