ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧಿಯ ಖರ್ಚಿಗಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಧನ ಸಹಾಯ ಮಾಡಿ, ಮಾನವೀಯತೆ ಮೆರೆದಿದ್ದಾರೆ.
ಠಾಣೆಯ ಕೆಲಸಕ್ಕಾಗಿ ಬರುತ್ತಿದ್ದ ವನಿತಾ ಎಂಬ ಮಹಿಳೆಗೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ನೇತೃತ್ವದಲ್ಲಿ ಸುಮಾರು 27,000 ಸಾವಿರ ನಗದು ಹಣವನ್ನು ನೀಡಿ, ಸಹಾಯ ಹಸ್ತ ಚಾಚಿದ್ದಾರೆ. ಬಂಟ್ವಾಳ ಪೇಟೆ ನಿವಾಸಿಯಾಗಿರುವ ವನಿತ ಅವರು ತೀರಾ ಬಡತನದ ಕುಟುಂಬದಲ್ಲಿ ಜೀವನ ನಡೆಸುತ್ತಿದ್ದು, ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಶುಚಿತ್ವದ ಕೆಲಸ ಮಾಡುತ್ತಿದ್ದರು.
ಆದರೆ ವನಿತಾರವರು ಇತ್ತೀಚೆಗೆ ಮನೆಯ ಸಮೀಪ ಬಿದ್ದ ಪರಿಣಾಮ ಕೈ ಮೂಳೆ ಮುರಿತಕ್ಕೆ ಒಳಗಾಗಿ ಕೆಲಸಕ್ಕೆ ಬರಲು ಅಸಾಧ್ಯವಾಗಿತ್ತು.
ತೀರಾ ಬಡತನದಲ್ಲಿರುವ ವನಿತಾ ಅವರಿಗೆ ಕೆಲಸ ಮಾಡಿದರೆ ಮೂರು ಹೊತ್ತು ಊಟ ಎಂಬ ಪರಿಸ್ಥಿತಿ, ಹಾಗಾಗಿ ಕಳೆದ ಕೆಲವು ತಿಂಗಳ ಕಾಲ ದುಡಿಮೆ ಇಲ್ಲದೆ ಕಷ್ಟದ ಸ್ಥಿತಿಯಲ್ಲಿರುವ ವಿಚಾರ ಪೊಲೀಸರ ಗಮನಕ್ಕೆ ಬಂದಿತು.
ಇದೀಗ ಬಂಟ್ವಾಳ ಪೊಲೀಸರು ವನಿತಾ ಅವರ ಮನೆಯ ಖರ್ಚಿಗಾಗಿ ಠಾಣೆಯಲ್ಲಿ ಸಿಬ್ಬಂದಿಗಳಿಂದ ಒಟ್ಟುಗೂಡಿಸಿದ ನಗದು ಹಣವನ್ನು ಅವರಿಗೆ ಹಸ್ತಾಂತರ ಮಾಡಿ, ಮಾನವೀಯ ಕಾರ್ಯ ಮಾಡಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…