ಜನ ಮನದ ನಾಡಿ ಮಿಡಿತ

Advertisement

ದಲಿತ ವಿರೋಧಿ ಸಚಿವ ಸುಧಾಕರ್ ರಾಜಿನಾಮೆ ಕೊಡಲಿ:ದಿನೇಶ್ ಅಮ್ಟೂರು

ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟದಲ್ಲಿರುವ ಸಚಿವ ಡಿ ಸುಧಾಕರ್ ರವರಿಂದ ದಲಿತ ಕುಟುಂಬ ಒಂದು ಪ್ರಾಣಭಯದಿಂದ ಬದುಕುತ್ತಿರುವುದು ಶೋಚನೀಯ ಸ್ಥಿತಿಯಾಗಿದೆ.

ಇದು ಇಡೀ ರಾಜ್ಯದಲ್ಲಿ ಇಂದಿನ ದಲಿತರ ಸ್ಥಿತಿಯ ಚಿತ್ರಣವಾಗಿದೆ. ಡಿ ಸುಧಾಕರ್ ರವರ ವಿರುದ್ಧ ದಲಿತರ ಮೇಲೆ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣದಡಿ ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೂ ಅವರ ರಾಜೀನಾಮೆ ಪಡೆಯದೆ ಇರುವುದು ಸರ್ಕಾರದ ಇಬ್ಬಗೆ ನೀತಿಯನ್ನು ತೋರುತ್ತದೆ, ಮತ್ತು ಈ ಸರ್ಕಾರದಲ್ಲಿ ದಲಿತರ ಪ್ರಾಣಗಳಿಗೆ ಮಾನಗಳಿಗೆ ಬೆಲೆ ಇಲ್ಲವೆಂಬುದು ಖಚಿತವಾಗಿದೆ ಎಂದು ತಾ.ಪಂ.ಮಾಜಿ ಉಪಾಧ್ಯಕ್ಷ ,ಎಸ್ ಸಿ ಮೋರ್ಚಾದ
ರಾಜ್ಯ ಕಾರ್ಯಕಾರಿಣಿ, ಸದಸ್ಯ ದಿನೇಶ್ ಅಮ್ಟೂರು ತಿಳಿಸಿದ್ದಾರೆ.

ಸೆವೆನ್ ಹಿಲ್ಸ್ ಕಂಪನಿಯ ಪಾಲುದಾರರಾದ ಡಿ ಸುಧಾಕರ್ ರವರು ಮೋಸದಿಂದ ಯಲಹಂಕ ಗ್ರಾಮದ ಸುಬ್ಬಮ್ಮ ರವರಿಗೆ ಸೇರಿದ 108/1 ಸರ್ವ ನಂಬರ್ ಜಮೀನನ್ನು ಕಬಳಿಕೆ ಮಾಡಿರುವುದು ಸ್ಪಷ್ಟವಾಗಿ ದಾಖಲೆ ಸಮೇತ ತಿಳಿಯುತ್ತಿದೆ, ಈ ಜಮೀನಿನ ವಿವಾದವು ನ್ಯಾಯಾಲಯದಲ್ಲಿ ಇರುವಾಗಲೇ ಡಿ. ಸುಧಾಕರ್ ರವರು ತಮ್ಮ 40 ಜನ ಪುಡಿ ರೌಡಿಗಳನ್ನು ಕಳಿಸಿ ಆ ದಲಿತ ಕುಟುಂಬದ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಲ್ಲದೆ ಜೆಸಿಬಿಯಿಂದ ಅವರ ಮನೆಯನ್ನು ನೆಲಸಮ ಮಾಡಿದ್ದಾರೆ. ಈ ವಿಚಾರವಾಗಿ ವೈರಲ್ ಆದ ವಿಡಿಯೋ ಒಂದರಲ್ಲಿ ನಾನು ಮಚ್ಚುಗಳನ್ನು ಹಿಡಿದು ಆಂಧ್ರಪ್ರದೇಶದಲ್ಲಿ ಓಡಾಡಿರುವ ರೌಡಿ ಎಂದು ಅವರೇ ಹೇಳಿಕೊಂಡಿದ್ದಾರೆ.

ಇಂತಹ ರೌಡಿಗಳಿಗೆ ಸಚಿವ ಸ್ಥಾನ ನೀಡಿದ ಕಾಂಗ್ರೆಸ್ ಸರ್ಕಾರದಿಂದ ನಾವು ಉತ್ತಮ ಅಡಳಿತವನ್ನು ನಿರೀಕ್ಷಿಸಲು ಸಾಧ್ಯವಿಲ್ಲಾ.

ಈ ಪ್ರಕರಣದಲ್ಲಿ ಡಿ. ಸುಧಾಕರ್ ರವರ ರಾಜೀನಾಮೆಯನ್ನು ಶೀಘ್ರವೇ ಪಡೆದು ಅವರನ್ನು ಕಾನೂನಾತ್ಮಕವಾಗಿ ಬಂಧಿಸಬೇಕೆಂಬುದು ನನ್ನ ಆಗ್ರಹವಾಗಿದೆ.

ಕಾಂಗ್ರೆಸ್ ಸರ್ಕಾರದ ಮತ್ತೊಬ್ಬ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಸಾರ್ವಜನಿಕವಾಗಿ ಹೊಲಗೇರಿ ಎಂಬ ಜಾತಿ ನಿಂದಕ ಪದವನ್ನು ಬಳಸಿ ಸಚಿವ ಸಂಪುಟದಲ್ಲಿ ಉಳಿಯುತ್ತಾರೆ, ಈಗ ಸಚಿವ ಸಂಪುಟದ ಮತ್ತೊಬ್ಬ ಸಚಿವ ಡಿ.ಸುಧಾಕರ್ ದಲಿತರ ಮೇಲೆ ದೌರ್ಜನ್ಯ ಎಸಗಿ ಪ್ರಾಣಬೆದರಿಕೆ ಒಡ್ಡಿ ಸಚಿವ ಸಂಪುಟದಲ್ಲಿ ಉಳಿಯಬಹುದಾದರೆ ಇಂಥ ಸರ್ಕಾರದಿಂದ ದಲಿತರ ರಕ್ಷಣೆ ಸಾಧ್ಯವೇ? ಎಸ್ ಸಿ.ಎಸ್ ,ಟಿ ಹಣವನ್ನು ತನ್ನ ಇಚ್ಚೆ ಬಂದಂತೆ ಬಳಸಿಕೊಳ್ಳುತ್ತಿರುವ ಈ ಸರ್ಕಾರದಿಂದ ಪರಿಶಿಷ್ಟ ಜಾತಿಯವರ ಅಭಿವೃದ್ಧಿ ಸಾಧ್ಯವೇ ? ಇಂತಹ ಆ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರವು ಈ ರಾಜ್ಯಕ್ಕೆ ಬೇಕಾಗಿದೆಯೇ ? ಎಂದು ಅವರು ಪ್ರಶ್ನಿಸಿ ಪತ್ರಿಕಾ ಪ್ರಕಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!