ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ಹೆದ್ದಾರಿ ಬದಲು ಕೆಸರು ಗದ್ದೆ!!

ಬಂಟ್ವಾಳ: ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದ ರಸ್ತೆಯ ಅವ್ಯವಸ್ಥೆಯನ್ನು ಹೇಳಲು ಅಸಾಧ್ಯವಾಗಿದೆ.


ರಾಷ್ಟ್ರೀಯ ಹೆದ್ದಾರಿ ಬದಲು ಕೆಸರು ಗದ್ದೆಯಾಗಿದೆ. ರಸ್ತೆ ಅಂತ ಬೋರ್ಡ್ ಹಾಕಿದರೆ ಮಾತ್ರ ನೀವು ರಸ್ತೆ ಎಂದು ನಂಬಬಹುದು…ಅಂತಹ ದುಸ್ಥಿತಿಯಲ್ಲಿರುವ ಕಲ್ಲಡ್ಕದ ಅವಸ್ಥೆಯನ್ನು ಹೇಳುವುದು ಯಾರ ಬಳಿ,ಕೇಳುವವರು ಯಾರು ? ಎಂಬ ಚಿಂತೆಯಲ್ಲಿದ್ದಾರೆ.
ಮನೆಯ ಅಂಗಳ ತುಂಬಾ ಕೆಸರು ನೀರು, ಅಂಗಡಿ ಬಾಗಿಲು ತೆರೆದರೆ ಒಳಗೆ ನುಗ್ಗುತ್ತದೆ ಕೆಸರು, ನಡೆದುಕೊಂಡು ಹೋಗಲು ದಾರಿಯಿಲ್ಲ,ನೀರು ಹರಿದು ಹೋಗಲು ಚರಂಡಿಯಿಲ್ಲ,ನಿತ್ಯ ಟ್ರಾಫಿಕ್ ಜಾಮ್ ಇದು ನಮ್ಮೂರ ಕಲ್ಲಡ್ಕ ದ ಸಮಸ್ಯೆ.

ವಾಹನಗಳ ಓಡಾಟದ ಭರಾಟೆಯ ನಡುವೆ ಇಕ್ಕಟ್ಟಾದ ಸರ್ವೀಸ್ ರಸ್ತೆಯಲ್ಲಿ ಓವರ್ ಟೇಕ್ ಮಾಡುವುದರಿಂದ ಅಪಘಾತವೇ ಮೊದಲಾದ ವಿಷಯಗಳನ್ನು ಇಟ್ಟುಕೊಂಡು ಕೆಲ ದಿನಗಳ ಹಿಂದೆ ರಸ್ತೆ ದುರಸ್ತಿಗೊಳಿಸಬೇಕು, ಧೂಳಿನಿಂದ ಮುಕ್ತಿ ನೀಡಬೇಕು ಎಂದು ಆಗ್ರಹಿಸಿ ಕಲ್ಲಡ್ಕದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಆಗಸ್ಟ್ ಅಂತ್ಯದೊಳಗೆ ಕಾಮಗಾರಿ ಆರಂಭಿಸಿ ಎಲ್ಲದಕ್ಕೂ ಮುಕ್ತಿ ನೀಡುತ್ತೇವೆ ಎಂದು ಗುತ್ತಿಗೆದಾರ ಕಂಪನಿ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆಗೆ ಅಂತ್ಯ ದೊರಕಿತ್ತು. ಆದರೆ ಇದೀಗ ಕಾಮಗಾರಿ ನಡೆಸಲು ಮಳೆ ಅಡ್ಡಿಯಾಗಿರುವುದು ಒಂದು ಸಮಸ್ಯೆಯಾದರೆ, ರಸ್ತೆಯಲ್ಲಿ ನೀರು ಹರಿದುಹೋಗಲು ಜಾಗವೇ ಇಲ್ಲದ ಕಾರಣ, ಮೂರು ನಾಲ್ಕಿಂಚು ನೀರು ನಿಲ್ಲುವುದು ಹಾಗೂ ಇಡೀ ರಸ್ತೆ ಕೆಸರುಮಯವಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವಕ್ಕೆ ಅಪಾಯ ತಂದೊಡ್ಡಿರುವುದು ಇನ್ನೊಂದು ಸಮಸ್ಯೆ.

ಶಾಲೆ, ಕಾಲೇಜುಗಳಿಗೆ ಬಸ್ಸಿಗಾಗಿ ಕಾಯುವವರು ಸಂಕಟ ಅನುಭವಿಸುತ್ತಿದ್ದಾರೆ. ಇಷ್ಟಾದರೂ ಘನಗಾತ್ರದ ವಾಹನಗಳು ವೇಗವಾಗಿ ಹೋಗುವುದನ್ನು ನಿಲ್ಲಿಸಿಲ್ಲ. ಇದರ ಪರಿಣಾಮ, ಅವುಗಳ ಚಕ್ರದಿಂದ ಹೊರಬಿದ್ದ ಕೆಸರುಮಿಶ್ರಿತ ನೀರು ದಾರಿಯಲ್ಲಿ ನಿಂತರವ ಮೇಲೆಗರುತ್ತದೆ. ಇಂಥ ಘಟನೆಗಳು ವಾಹನ ನಿಲ್ಲಿಸಿ, ಹೋಟೆಲ್ ಗೆ ಹೋಗುವವರ ಮೇಲೆ ಆಗಿದೆ. ಬಿಳಿ ಷರಟು, ಪಂಚೆ ಧರಿಸುವವರ ಮೈಯೆಲ್ಲಾ ಕೆಸರಾಭಿಷೇಕ ಆಗಿ ಬಣ್ಣವೇ ಬದಲಾದ ಉದಾಹರಣೆಗಳಿವೆ. ದ್ವಿಚಕ್ರ ವಾಹನಗಳು ಈಗ ಸ್ಕಿಡ್ ಆಗಿ ಬೀಳುವುದು ಜಾಸ್ತಿ.

ಇಷ್ಟೆಲ್ಲಾ ಆದರೂ ಜನರ ಸಮಸ್ಯೆಗಳಿಗೆ ಪರಿಹಾರ ಮಾಡುವ ನಿಟ್ಟಿನಲ್ಲಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯಾಗಲಿ,ಜನಪ್ರತಿನಿಧಿಯಾಗಲಿ ಅಥವಾ ಜಿಲ್ಲಾಧಿಕಾರಿಯಾಗಲಿ ಮುಂದೆ ಬರುತ್ತಿಲ್ಲ ಎಂಬ ಆರೋಪ ಕಲ್ಲಡ್ಕ ನಿವಾಸಿಗಳದ್ದು.
ಕಳೆದ ಎರಡು ವರ್ಷಗಳಿಂದ ‌ನಿರಂತರವಾಗಿ ದೂಳು ಕೆಸರಿನ ಮಧ್ಯದಲ್ಲಿ ನಲುಗಿ ಹೋಗಿರುವ ಕಲ್ಲಡ್ಕದ ಜನತೆಗೆ ತಾತ್ಕಾಲಿಕ ಪರಿಹಾರವಾದರೂ ಏನು ಎಂಬ ಪ್ರಶ್ನೆ ಉದ್ಭವವಾಗಿದೆ.
ಅಭಿವೃದ್ಧಿ ಹೆಸರಿನಲ್ಲಿ ಕಲ್ಲಡ್ಕದ ಜನತೆ ಹೈರಾಣಾಗಿದ್ದಾರೆ,ಜೊತೆಗೆ ರೋಗದ ಭಯದಿಂದ ನಲುಗಿಹೋಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!