ಬಂಟ್ವಾಳ: ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದ ರಸ್ತೆಯ ಅವ್ಯವಸ್ಥೆಯನ್ನು ಹೇಳಲು ಅಸಾಧ್ಯವಾಗಿದೆ.
ರಾಷ್ಟ್ರೀಯ ಹೆದ್ದಾರಿ ಬದಲು ಕೆಸರು ಗದ್ದೆಯಾಗಿದೆ. ರಸ್ತೆ ಅಂತ ಬೋರ್ಡ್ ಹಾಕಿದರೆ ಮಾತ್ರ ನೀವು ರಸ್ತೆ ಎಂದು ನಂಬಬಹುದು…ಅಂತಹ ದುಸ್ಥಿತಿಯಲ್ಲಿರುವ ಕಲ್ಲಡ್ಕದ ಅವಸ್ಥೆಯನ್ನು ಹೇಳುವುದು ಯಾರ ಬಳಿ,ಕೇಳುವವರು ಯಾರು ? ಎಂಬ ಚಿಂತೆಯಲ್ಲಿದ್ದಾರೆ.
ಮನೆಯ ಅಂಗಳ ತುಂಬಾ ಕೆಸರು ನೀರು, ಅಂಗಡಿ ಬಾಗಿಲು ತೆರೆದರೆ ಒಳಗೆ ನುಗ್ಗುತ್ತದೆ ಕೆಸರು, ನಡೆದುಕೊಂಡು ಹೋಗಲು ದಾರಿಯಿಲ್ಲ,ನೀರು ಹರಿದು ಹೋಗಲು ಚರಂಡಿಯಿಲ್ಲ,ನಿತ್ಯ ಟ್ರಾಫಿಕ್ ಜಾಮ್ ಇದು ನಮ್ಮೂರ ಕಲ್ಲಡ್ಕ ದ ಸಮಸ್ಯೆ.
ವಾಹನಗಳ ಓಡಾಟದ ಭರಾಟೆಯ ನಡುವೆ ಇಕ್ಕಟ್ಟಾದ ಸರ್ವೀಸ್ ರಸ್ತೆಯಲ್ಲಿ ಓವರ್ ಟೇಕ್ ಮಾಡುವುದರಿಂದ ಅಪಘಾತವೇ ಮೊದಲಾದ ವಿಷಯಗಳನ್ನು ಇಟ್ಟುಕೊಂಡು ಕೆಲ ದಿನಗಳ ಹಿಂದೆ ರಸ್ತೆ ದುರಸ್ತಿಗೊಳಿಸಬೇಕು, ಧೂಳಿನಿಂದ ಮುಕ್ತಿ ನೀಡಬೇಕು ಎಂದು ಆಗ್ರಹಿಸಿ ಕಲ್ಲಡ್ಕದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಆಗಸ್ಟ್ ಅಂತ್ಯದೊಳಗೆ ಕಾಮಗಾರಿ ಆರಂಭಿಸಿ ಎಲ್ಲದಕ್ಕೂ ಮುಕ್ತಿ ನೀಡುತ್ತೇವೆ ಎಂದು ಗುತ್ತಿಗೆದಾರ ಕಂಪನಿ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆಗೆ ಅಂತ್ಯ ದೊರಕಿತ್ತು. ಆದರೆ ಇದೀಗ ಕಾಮಗಾರಿ ನಡೆಸಲು ಮಳೆ ಅಡ್ಡಿಯಾಗಿರುವುದು ಒಂದು ಸಮಸ್ಯೆಯಾದರೆ, ರಸ್ತೆಯಲ್ಲಿ ನೀರು ಹರಿದುಹೋಗಲು ಜಾಗವೇ ಇಲ್ಲದ ಕಾರಣ, ಮೂರು ನಾಲ್ಕಿಂಚು ನೀರು ನಿಲ್ಲುವುದು ಹಾಗೂ ಇಡೀ ರಸ್ತೆ ಕೆಸರುಮಯವಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವಕ್ಕೆ ಅಪಾಯ ತಂದೊಡ್ಡಿರುವುದು ಇನ್ನೊಂದು ಸಮಸ್ಯೆ.
ಶಾಲೆ, ಕಾಲೇಜುಗಳಿಗೆ ಬಸ್ಸಿಗಾಗಿ ಕಾಯುವವರು ಸಂಕಟ ಅನುಭವಿಸುತ್ತಿದ್ದಾರೆ. ಇಷ್ಟಾದರೂ ಘನಗಾತ್ರದ ವಾಹನಗಳು ವೇಗವಾಗಿ ಹೋಗುವುದನ್ನು ನಿಲ್ಲಿಸಿಲ್ಲ. ಇದರ ಪರಿಣಾಮ, ಅವುಗಳ ಚಕ್ರದಿಂದ ಹೊರಬಿದ್ದ ಕೆಸರುಮಿಶ್ರಿತ ನೀರು ದಾರಿಯಲ್ಲಿ ನಿಂತರವ ಮೇಲೆಗರುತ್ತದೆ. ಇಂಥ ಘಟನೆಗಳು ವಾಹನ ನಿಲ್ಲಿಸಿ, ಹೋಟೆಲ್ ಗೆ ಹೋಗುವವರ ಮೇಲೆ ಆಗಿದೆ. ಬಿಳಿ ಷರಟು, ಪಂಚೆ ಧರಿಸುವವರ ಮೈಯೆಲ್ಲಾ ಕೆಸರಾಭಿಷೇಕ ಆಗಿ ಬಣ್ಣವೇ ಬದಲಾದ ಉದಾಹರಣೆಗಳಿವೆ. ದ್ವಿಚಕ್ರ ವಾಹನಗಳು ಈಗ ಸ್ಕಿಡ್ ಆಗಿ ಬೀಳುವುದು ಜಾಸ್ತಿ.
ಇಷ್ಟೆಲ್ಲಾ ಆದರೂ ಜನರ ಸಮಸ್ಯೆಗಳಿಗೆ ಪರಿಹಾರ ಮಾಡುವ ನಿಟ್ಟಿನಲ್ಲಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯಾಗಲಿ,ಜನಪ್ರತಿನಿಧಿಯಾಗಲಿ ಅಥವಾ ಜಿಲ್ಲಾಧಿಕಾರಿಯಾಗಲಿ ಮುಂದೆ ಬರುತ್ತಿಲ್ಲ ಎಂಬ ಆರೋಪ ಕಲ್ಲಡ್ಕ ನಿವಾಸಿಗಳದ್ದು.
ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ದೂಳು ಕೆಸರಿನ ಮಧ್ಯದಲ್ಲಿ ನಲುಗಿ ಹೋಗಿರುವ ಕಲ್ಲಡ್ಕದ ಜನತೆಗೆ ತಾತ್ಕಾಲಿಕ ಪರಿಹಾರವಾದರೂ ಏನು ಎಂಬ ಪ್ರಶ್ನೆ ಉದ್ಭವವಾಗಿದೆ.
ಅಭಿವೃದ್ಧಿ ಹೆಸರಿನಲ್ಲಿ ಕಲ್ಲಡ್ಕದ ಜನತೆ ಹೈರಾಣಾಗಿದ್ದಾರೆ,ಜೊತೆಗೆ ರೋಗದ ಭಯದಿಂದ ನಲುಗಿಹೋಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…