ವಿಟ್ಲ: ಆಟೋ ರಿಕ್ಷಾವೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಹಿತ ಆರೋಪಿಯೋರ್ವರನ್ನು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಸೆ.16 ರಂದು ನಡೆದಿದೆ.
ಸುಳ್ಯ ಕಸಬಾ ಗ್ರಾಮ ಸುಳ್ಯ ನಿವಾಸಿಯಾದ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ಬಂಧಿತ ಆರೋಪಿಯಾಗಿದ್ದಾರೆ.
ವಿಟ್ಲ ಠಾಣಾ ಪೊಲೀಸರು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಆ ದಾರಿಯಾಗಿ ಬಂದ ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಆಟೋ ರಿಕ್ಷಾದೊಳಗೆ 6.110 ಕೆ ಜಿ. ಗಾಂಜಾ ಪತ್ತೆಯಾಗಿದೆ. ಕೂಡಲೇ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ 1,35,000 ರೂಪಾಯಿ ಮೌಲ್ಯದ 6.110 ಕೆ ಜಿ. ಗಾಂಜಾ ಸಹಿತ 1,60,000 ರೂಪಾಯಿ ಮೌಲ್ಯದ ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯ ವಿರುದ್ಧ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…