ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಅಜಾಗರೂಕತೆಯಿಂದ ಬಸ್ ಚಾಲನೆ, ಎಕ್ಸ್ಪ್ರೆಸ್ ಬಸ್ ಬೈಕಿಗೆ ಡಿಕ್ಕಿ; ಇಬ್ಬರು ಗಂಭೀರ

ಸುರತ್ಕಲ್ : ಅತಿವೇಗ ಮತ್ತು ಅಜಾಗರೂಕತೆಯಿಂದ ಖಾಸಗಿ ಎಕ್ಸ್ ಪ್ರೆಸ್ ಬಸ್ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಹಳೆಯಂಗಡಿ ಇಂದಿರಾ ನಗರ ನಿವಾಸಿ ಮುಹಮ್ಮದ್ ಸಾಹಿಲ್ ಮತ್ತು ಪಕ್ಷಿಕೆರೆ ಹೊಸಕಾಡು ನಿವಾಸಿ ಅರಾಫತ್ ಎಂದು ಗುರುತಿಸಲಾಗಿದೆ .

ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ಸು ಸುರತ್ಕಲ್ ಹೊಸಬೆಟ್ಟು ಎಂಬಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ರಸ್ತೆ ಬದಿ ಬೈಕ್ ನೊಂದಿಗೆ ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಖಾಸಗಿ ಎಕ್ಸ್ ಪ್ರೆಸ್ ಬಸ್ಸಿನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾವಣೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಇನ್ನು ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!