ಜನ ಮನದ ನಾಡಿ ಮಿಡಿತ

Advertisement

ಕೇಂದ್ರ ಸರ್ಕಾರದ “ಪಿಎಂ ವಿಶ್ವಕರ್ಮ” ಯೋಜನೆಗೆ ಚಾಲನೆ ನೀಡಿದ ಸಚಿವ ಪರ್ಷೋತ್ತಮ್ ರೂಪಾಲಾ

ಸಾಂಪ್ರದಾಯಿಕ ಕಸುಬುಗಳ ಮೂಲಕ ದೇಶಕ್ಕೆ ಕೊಡುಗೆ ಕೊಟ್ಟ ಕುಶಲಕರ್ಮಿಗಳು ಮತ್ತೆ ಮುನ್ನಲೆಗೆ ಬರಲಿದ್ದಾರೆ: ಶಾಸಕ ವೇದವ್ಯಾಸ್ ಕಾಮತ್

ಸ್ವಾತಂತ್ರ್ಯ ಪೂರ್ವದಿಂದಲೂ ದೇಶದ ಏಳಿಗೆಗೆ ತಮ್ಮದೇ ಆದ ಸಾಂಪ್ರದಾಯಿಕ ಕಸಬುಗಳ ಮೂಲಕ ಅಮೂಲ್ಯ ಕೊಡುಗೆಯನ್ನು ಕೊಟ್ಟಿರುವ ಕರ ಕುಶಲಕರ್ಮಿಗಳನ್ನು ಮತ್ತೆ ಜಾಗತಿಕ ಮುನ್ನಲೆಗೆ ತರುವ ನಿಟ್ಟಿನಲ್ಲಿ ಭಗವಾನ್ ವಿಶ್ವಕರ್ಮ ಜಯಂತಿಯಂದು “ಪಿಎಂ ವಿಶ್ವಕರ್ಮ” ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು

ಕೇಂದ್ರ ಸರ್ಕಾರದ “ಪಿಎಂ ವಿಶ್ವಕರ್ಮ” ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವರಾದ ಪರ್ಷೋತ್ತಮ್ ರೂಪಾಲಾರವರ ಜೊತೆಗೆ ನಗರದ ಕಾರ್ ಸ್ಟ್ರೀಟ್ ಭಾಗದಲ್ಲಿರುವ ಕಾಳಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಜಿಲ್ಲಾಡಳಿತದ ವತಿಯಿಂದ ನಡೆಯಲಿದ್ದ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ತೆರಳಿದರು.

ಈ ವೇಳೆ ಆಹ್ವಾನವೇ ಇಲ್ಲದಿದ್ದರೂ ಕೇಂದ್ರ ಸಚಿವರಾದ ಪರ್ಷೋತ್ತಮ್ ರೂಪಾಲಾರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಆದರೆ ಮುಖ್ಯವಾಗಿ ಉಪಸ್ಥಿತರಿರಬೇಕಿದ್ದ ಜಿಲ್ಲೆಯ ಉಸ್ತುವಾರಿ ಸಚಿವರೇ ಇರಲಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಬಿಟ್ಟರೆ ಸರ್ಕಾರದ ಬೇರಾವುದೇ ಪ್ರತಿನಿಧಿಗಳು ಇರಲಿಲ್ಲ. ಶಿಷ್ಟಾಚಾರದ ಪ್ರಕಾರ ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ಸರ್ಕಾರದ ಬೇಜವಾಬ್ದಾರಿ ಎದ್ದು ಕಾಣಿಸುತ್ತಿತ್ತು. ಇದು ಅತ್ಯಂತ ಬೇಸರದ ಸಂಗತಿ ಎಂದು ತಿಳಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!