ಜನ ಮನದ ನಾಡಿ ಮಿಡಿತ

Advertisement

ಕೇಂದ್ರ ಸರ್ಕಾರದ “ಪಿಎಂ ವಿಶ್ವಕರ್ಮ” ಯೋಜನೆಗೆ ಚಾಲನೆ ನೀಡಿದ ಸಚಿವ ಪರ್ಷೋತ್ತಮ್ ರೂಪಾಲಾ

ಸಾಂಪ್ರದಾಯಿಕ ಕಸುಬುಗಳ ಮೂಲಕ ದೇಶಕ್ಕೆ ಕೊಡುಗೆ ಕೊಟ್ಟ ಕುಶಲಕರ್ಮಿಗಳು ಮತ್ತೆ ಮುನ್ನಲೆಗೆ ಬರಲಿದ್ದಾರೆ: ಶಾಸಕ ವೇದವ್ಯಾಸ್ ಕಾಮತ್

ಸ್ವಾತಂತ್ರ್ಯ ಪೂರ್ವದಿಂದಲೂ ದೇಶದ ಏಳಿಗೆಗೆ ತಮ್ಮದೇ ಆದ ಸಾಂಪ್ರದಾಯಿಕ ಕಸಬುಗಳ ಮೂಲಕ ಅಮೂಲ್ಯ ಕೊಡುಗೆಯನ್ನು ಕೊಟ್ಟಿರುವ ಕರ ಕುಶಲಕರ್ಮಿಗಳನ್ನು ಮತ್ತೆ ಜಾಗತಿಕ ಮುನ್ನಲೆಗೆ ತರುವ ನಿಟ್ಟಿನಲ್ಲಿ ಭಗವಾನ್ ವಿಶ್ವಕರ್ಮ ಜಯಂತಿಯಂದು “ಪಿಎಂ ವಿಶ್ವಕರ್ಮ” ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು

ಕೇಂದ್ರ ಸರ್ಕಾರದ “ಪಿಎಂ ವಿಶ್ವಕರ್ಮ” ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವರಾದ ಪರ್ಷೋತ್ತಮ್ ರೂಪಾಲಾರವರ ಜೊತೆಗೆ ನಗರದ ಕಾರ್ ಸ್ಟ್ರೀಟ್ ಭಾಗದಲ್ಲಿರುವ ಕಾಳಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಜಿಲ್ಲಾಡಳಿತದ ವತಿಯಿಂದ ನಡೆಯಲಿದ್ದ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ತೆರಳಿದರು.

ಈ ವೇಳೆ ಆಹ್ವಾನವೇ ಇಲ್ಲದಿದ್ದರೂ ಕೇಂದ್ರ ಸಚಿವರಾದ ಪರ್ಷೋತ್ತಮ್ ರೂಪಾಲಾರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಆದರೆ ಮುಖ್ಯವಾಗಿ ಉಪಸ್ಥಿತರಿರಬೇಕಿದ್ದ ಜಿಲ್ಲೆಯ ಉಸ್ತುವಾರಿ ಸಚಿವರೇ ಇರಲಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಬಿಟ್ಟರೆ ಸರ್ಕಾರದ ಬೇರಾವುದೇ ಪ್ರತಿನಿಧಿಗಳು ಇರಲಿಲ್ಲ. ಶಿಷ್ಟಾಚಾರದ ಪ್ರಕಾರ ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ಸರ್ಕಾರದ ಬೇಜವಾಬ್ದಾರಿ ಎದ್ದು ಕಾಣಿಸುತ್ತಿತ್ತು. ಇದು ಅತ್ಯಂತ ಬೇಸರದ ಸಂಗತಿ ಎಂದು ತಿಳಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!