ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ತಾಲೂಕು ಆಡಳಿತ ಸೌಧದಿಂದ ವಿಶ್ವಕರ್ಮ ಜಯಂತಿ ಆಚರಣೆ

ಮೂಡುಬಿದಿರೆ: ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಭಾನುವಾರ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು.


ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಅವರು ವಿಶ್ವಕರ್ಮ ಜಯಂತಿಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿ ಬ್ರಹ್ಮಾಂಡವನ್ನು ಸೃಷ್ಟಿಸಿದ್ದು ವಿಶ್ವಕರ್ಮ. ಶಿಲ್ಪವೃತ್ತಿಯೆಂಬುದು ಕೇವಲ ವೃತ್ತಿಯಲ್ಲ. ನಿಸ್ತೇಜ ವಸ್ತುಗಳಿಗೆ ಜೀವ ತುಂಬುವ ಆ ವೃತ್ತಿಯೊಂದಿಗೆ ಆಧ್ಯಾತ್ಮ, ಕೌಶಲ್ಯ, ತ್ಯಾಗ, ತಪಸ್ಸಿನ ಗುಣ ಮಿಳಿತಗೊಂಡಿದೆ ಎಂದರು. ವಿಜ್ಞಾನ ತಂತ್ರಜ್ಞಾನದಲ್ಲಿ ನಾವೆಷ್ಟೇ ಮುಂದುವರಿದಿದ್ದರೂ ಬ್ರಹ್ಮಾಂಡದ ಸೃಷ್ಟಿಯ ಬಗ್ಗೆ ಕುತೂಹಲವಿದೆ. ವಿಶ್ವಕರ್ಮನು ಶೋಧನೆ ಮಾಡಿದಷ್ಟು ಆಧ್ಯಾತ್ಮದತ್ತ ಸೆಳೆಯುತ್ತದೆ. ಎಲ್ಲಾ ದೇವರಿಗೆ ಮೂರ್ತರೂಪವನ್ನು ನೀಡಿದ್ದು ವಿಶ್ವಕರ್ಮ, ವಿಶ್ವಕರ್ಮರೇ ಸನಾತನ ಸಂಸ್ಕೃತಿಯ ಮೂಲವಾಗಿದ್ದಾರೆ ಎಂದ ಅವರು ಪರಂಪರೆಯಲ್ಲಿ, ಇತಿಹಾಸದಲ್ಲಿ ಭವ್ಯತೆಯನ್ನು ಹೊಂದಿರುವ ವಿಶ್ವಕರ್ಮ ಸಮುದಾಯದ ವೃತ್ತಿಗಳಿಗೆ ಭವಿಷ್ಯದ ಉದ್ಯಮರಂಗದಲ್ಲಿ ವಿಫುಲ ಅವಕಾಶಗಳಿವೆ ಎಂದರು.


ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.
ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅಧ್ಯಕ್ಷತೆ ವಹಿಸಿ, ದಾರ್ಶನಿಕರು, ಮಹಾಪುರುಷರ ಚಿಂತನೆಗಳನ್ನು ಅನುಸರಿಸುವುದು ಮುಖ್ಯ. ಸರಕಾರವು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇವುಗಳು ಜಾತಿ ಮತ ಧರ್ಮವನ್ನು ಮೀರಿದ ಆಚರಣೆಗಳಾಗಬೇಕಾದುದು ಔಚಿತ್ಯ ಪೂರ್ಣ ಎಂದರು.

ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಶಿವರಾಮ ಆಚಾರ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸತೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಡೆಪ್ಯೂಟಿ ತಹಸೀಲ್ದಾರ್ ರಾಮ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!