ಮೂಡುಬಿದಿರೆ: ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಭಾನುವಾರ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು.
ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಅವರು ವಿಶ್ವಕರ್ಮ ಜಯಂತಿಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿ ಬ್ರಹ್ಮಾಂಡವನ್ನು ಸೃಷ್ಟಿಸಿದ್ದು ವಿಶ್ವಕರ್ಮ. ಶಿಲ್ಪವೃತ್ತಿಯೆಂಬುದು ಕೇವಲ ವೃತ್ತಿಯಲ್ಲ. ನಿಸ್ತೇಜ ವಸ್ತುಗಳಿಗೆ ಜೀವ ತುಂಬುವ ಆ ವೃತ್ತಿಯೊಂದಿಗೆ ಆಧ್ಯಾತ್ಮ, ಕೌಶಲ್ಯ, ತ್ಯಾಗ, ತಪಸ್ಸಿನ ಗುಣ ಮಿಳಿತಗೊಂಡಿದೆ ಎಂದರು. ವಿಜ್ಞಾನ ತಂತ್ರಜ್ಞಾನದಲ್ಲಿ ನಾವೆಷ್ಟೇ ಮುಂದುವರಿದಿದ್ದರೂ ಬ್ರಹ್ಮಾಂಡದ ಸೃಷ್ಟಿಯ ಬಗ್ಗೆ ಕುತೂಹಲವಿದೆ. ವಿಶ್ವಕರ್ಮನು ಶೋಧನೆ ಮಾಡಿದಷ್ಟು ಆಧ್ಯಾತ್ಮದತ್ತ ಸೆಳೆಯುತ್ತದೆ. ಎಲ್ಲಾ ದೇವರಿಗೆ ಮೂರ್ತರೂಪವನ್ನು ನೀಡಿದ್ದು ವಿಶ್ವಕರ್ಮ, ವಿಶ್ವಕರ್ಮರೇ ಸನಾತನ ಸಂಸ್ಕೃತಿಯ ಮೂಲವಾಗಿದ್ದಾರೆ ಎಂದ ಅವರು ಪರಂಪರೆಯಲ್ಲಿ, ಇತಿಹಾಸದಲ್ಲಿ ಭವ್ಯತೆಯನ್ನು ಹೊಂದಿರುವ ವಿಶ್ವಕರ್ಮ ಸಮುದಾಯದ ವೃತ್ತಿಗಳಿಗೆ ಭವಿಷ್ಯದ ಉದ್ಯಮರಂಗದಲ್ಲಿ ವಿಫುಲ ಅವಕಾಶಗಳಿವೆ ಎಂದರು.
ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.
ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅಧ್ಯಕ್ಷತೆ ವಹಿಸಿ, ದಾರ್ಶನಿಕರು, ಮಹಾಪುರುಷರ ಚಿಂತನೆಗಳನ್ನು ಅನುಸರಿಸುವುದು ಮುಖ್ಯ. ಸರಕಾರವು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇವುಗಳು ಜಾತಿ ಮತ ಧರ್ಮವನ್ನು ಮೀರಿದ ಆಚರಣೆಗಳಾಗಬೇಕಾದುದು ಔಚಿತ್ಯ ಪೂರ್ಣ ಎಂದರು.
ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಶಿವರಾಮ ಆಚಾರ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸತೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಡೆಪ್ಯೂಟಿ ತಹಸೀಲ್ದಾರ್ ರಾಮ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…