ದಕ್ಷಿಣ ಕನ್ನಡ; ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ನಡೆದಿದೆ.
ನಗರದ ಉರ್ವ ಮಾರಿಗುಡಿ ನಿವಾಸಿಯಾದ ರಾಜೇಶ್ ಬಿ.ಯು. (53) ಅವರಿಗೆ ಶನಿವಾರ ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಅವರು ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ರಾಜೇಶ್ ಅವರು 1993ನೇ ಬ್ಯಾಚ್ ಗೆ ಸೇರಿದವರಾಗಿದ್ದು, ನಿವೃತ್ತಿಗೆ ಇನ್ನೂ 7 ವರ್ಷಗಳ ಕಾಲ ಇತ್ತು. ಉತ್ತಮ ಸನ್ನಡತೆಯ ವ್ಯಕ್ತಿಯಾಗಿದ್ದ ರಾಜೇಶ್ ಇವರು ಮೂಲತಃ ವಾಮಂಜೂರು ಸಮೀಪದ ಮೂಡುಶೆಡ್ಡೆ ನಿವಾಸಿಯಾಗಿದ್ದು , ಪ್ರಸ್ತುತ ಮಂಗಳೂರಿನಲ್ಲಿ ವಾಸವಿದ್ದರು, ರಾಜೇಶ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಕ್ರಮವಾಗಿ ಮೂಡು ಶೆಡ್ಡೆ ಹಾಗೂ ಸಂತ ರೈಮೆಂಡ್ಸ್ ಹೈಸ್ಕೂಲ್ ವಾಮಂಜೂರು ಇಲ್ಲಿ ಪೂರೈಸಿದ್ದು, ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ ಶಾಲಾ ಶಿಕ್ಷಕರು ಮತ್ತು ತನ್ನ ಸಹಪಾಠಿ ವಿದ್ಯಾರ್ಥಿಗಳೊಡನೆ ಈಗಲೂ ನಿರಂತರ ಸಂಪರ್ಕವಿಟ್ಟುಕೊಂಡು, ಶಾಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಮಾದರಿ ಹಿರಿಯ ವಿದ್ಯಾರ್ಥಿ ಎನಿಸಿಕೊಂಡಿದ್ದರು.
ಅವರು ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…