ಜನ ಮನದ ನಾಡಿ ಮಿಡಿತ

Advertisement

ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿರಾಯ..!

ಸುಳ್ಯ ಜಯನಗರ ನಿವಾಸಿ ಮಹಿಳೆಗೆ ವಿದೇಶದಲ್ಲಿರುವ ಗಂಡ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ವಿಭಿನ್ನ ಘಟನೆ ನಡೆದಿದೆ.

ಕೇರಳ ತ್ರಿಶೂಲ್‌ ಮೂಲದ ಅಬ್ದುಲ್ ರಾಶಿದ್‌ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಹಿಳೆಯನ್ನು ವಿವಾಹವಾಗಿದ್ರು. ವಿವಾಹದ ಬಳಿಕ ಜೊತೆಗೆ ಉತ್ತಮವಾಗಿ ಸಂಸಾರ ನಡೆಸಿದ್ದು, ಇವರ ದಾಂಪತ್ಯಕ್ಕೆ ಎರಡು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದು ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಮಹಿಳೆಯನ್ನು ಸುಳ್ಯದಲ್ಲಿರುವ ತವರುಮನೆಯಲ್ಲಿ ಬಿಟ್ಟು ವಿದೇಶಕ್ಕೆ ಮರಳಿದ್ದಾನೆ.

ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಅಲ್ಪ ಸ್ವಲ್ಪ ಕಿರಿಕಿರಿ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಸಂಬಂಧಿಕರು, ಹಿರಿಯರು ಮಾತನಾಡಿ ಸರಿಪಡಿಸಲು ಪ್ರಯತ್ನಿಸಿದರು. ಆದರೆ ಇದು ಯಾವುದನ್ನು ಕೇಳದೇ ಪತಿ ರಾಶಿದ್‌ ಏಕಾಏಕಿ ಪತ್ನಿಯ ಮೊಬೈಲ್‌ಗೆ ಮೂರು ತಲಾಖ್‌ನ ವಾಟ್ಸಾಪ್‌ ಸಂದೇಶ ಕಳುಹಿಸಿದ್ದಾರೆ.

ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ಪತ್ನಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!