ಸುಳ್ಯ ಜಯನಗರ ನಿವಾಸಿ ಮಹಿಳೆಗೆ ವಿದೇಶದಲ್ಲಿರುವ ಗಂಡ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ವಿಭಿನ್ನ ಘಟನೆ ನಡೆದಿದೆ.
ಕೇರಳ ತ್ರಿಶೂಲ್ ಮೂಲದ ಅಬ್ದುಲ್ ರಾಶಿದ್ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಹಿಳೆಯನ್ನು ವಿವಾಹವಾಗಿದ್ರು. ವಿವಾಹದ ಬಳಿಕ ಜೊತೆಗೆ ಉತ್ತಮವಾಗಿ ಸಂಸಾರ ನಡೆಸಿದ್ದು, ಇವರ ದಾಂಪತ್ಯಕ್ಕೆ ಎರಡು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದು ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಮಹಿಳೆಯನ್ನು ಸುಳ್ಯದಲ್ಲಿರುವ ತವರುಮನೆಯಲ್ಲಿ ಬಿಟ್ಟು ವಿದೇಶಕ್ಕೆ ಮರಳಿದ್ದಾನೆ.
ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಅಲ್ಪ ಸ್ವಲ್ಪ ಕಿರಿಕಿರಿ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಸಂಬಂಧಿಕರು, ಹಿರಿಯರು ಮಾತನಾಡಿ ಸರಿಪಡಿಸಲು ಪ್ರಯತ್ನಿಸಿದರು. ಆದರೆ ಇದು ಯಾವುದನ್ನು ಕೇಳದೇ ಪತಿ ರಾಶಿದ್ ಏಕಾಏಕಿ ಪತ್ನಿಯ ಮೊಬೈಲ್ಗೆ ಮೂರು ತಲಾಖ್ನ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ಪತ್ನಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…