ಸುಳ್ಯ ಜಯನಗರ ನಿವಾಸಿ ಮಹಿಳೆಗೆ ವಿದೇಶದಲ್ಲಿರುವ ಗಂಡ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ವಿಭಿನ್ನ ಘಟನೆ ನಡೆದಿದೆ.
ಕೇರಳ ತ್ರಿಶೂಲ್ ಮೂಲದ ಅಬ್ದುಲ್ ರಾಶಿದ್ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಹಿಳೆಯನ್ನು ವಿವಾಹವಾಗಿದ್ರು. ವಿವಾಹದ ಬಳಿಕ ಜೊತೆಗೆ ಉತ್ತಮವಾಗಿ ಸಂಸಾರ ನಡೆಸಿದ್ದು, ಇವರ ದಾಂಪತ್ಯಕ್ಕೆ ಎರಡು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದು ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಮಹಿಳೆಯನ್ನು ಸುಳ್ಯದಲ್ಲಿರುವ ತವರುಮನೆಯಲ್ಲಿ ಬಿಟ್ಟು ವಿದೇಶಕ್ಕೆ ಮರಳಿದ್ದಾನೆ.
ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಅಲ್ಪ ಸ್ವಲ್ಪ ಕಿರಿಕಿರಿ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಸಂಬಂಧಿಕರು, ಹಿರಿಯರು ಮಾತನಾಡಿ ಸರಿಪಡಿಸಲು ಪ್ರಯತ್ನಿಸಿದರು. ಆದರೆ ಇದು ಯಾವುದನ್ನು ಕೇಳದೇ ಪತಿ ರಾಶಿದ್ ಏಕಾಏಕಿ ಪತ್ನಿಯ ಮೊಬೈಲ್ಗೆ ಮೂರು ತಲಾಖ್ನ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ಪತ್ನಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…