ಸುಳ್ಯ ಜಯನಗರ ನಿವಾಸಿ ಮಹಿಳೆಗೆ ವಿದೇಶದಲ್ಲಿರುವ ಗಂಡ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ವಿಭಿನ್ನ ಘಟನೆ ನಡೆದಿದೆ.
ಕೇರಳ ತ್ರಿಶೂಲ್ ಮೂಲದ ಅಬ್ದುಲ್ ರಾಶಿದ್ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಹಿಳೆಯನ್ನು ವಿವಾಹವಾಗಿದ್ರು. ವಿವಾಹದ ಬಳಿಕ ಜೊತೆಗೆ ಉತ್ತಮವಾಗಿ ಸಂಸಾರ ನಡೆಸಿದ್ದು, ಇವರ ದಾಂಪತ್ಯಕ್ಕೆ ಎರಡು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದು ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಮಹಿಳೆಯನ್ನು ಸುಳ್ಯದಲ್ಲಿರುವ ತವರುಮನೆಯಲ್ಲಿ ಬಿಟ್ಟು ವಿದೇಶಕ್ಕೆ ಮರಳಿದ್ದಾನೆ.
ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಅಲ್ಪ ಸ್ವಲ್ಪ ಕಿರಿಕಿರಿ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಸಂಬಂಧಿಕರು, ಹಿರಿಯರು ಮಾತನಾಡಿ ಸರಿಪಡಿಸಲು ಪ್ರಯತ್ನಿಸಿದರು. ಆದರೆ ಇದು ಯಾವುದನ್ನು ಕೇಳದೇ ಪತಿ ರಾಶಿದ್ ಏಕಾಏಕಿ ಪತ್ನಿಯ ಮೊಬೈಲ್ಗೆ ಮೂರು ತಲಾಖ್ನ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ಪತ್ನಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…