ಜನ ಮನದ ನಾಡಿ ಮಿಡಿತ

Advertisement

ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಡೀಲ್‌ ಪ್ರಕರಣ; ವಜ್ರದೇಹಿ ಮಠದ ಸ್ವಾಮೀಜಿ ಸ್ಪಷ್ಟನೆ

ಸಿಸಿಬಿ ವಶದಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆದಾಯ ಮತ್ತು ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು, ಪತ್ರದಲ್ಲಿ ಅಕ್ರಮ ಹಣದ ವ್ಯವಹಾರ ಎಂದು ಬಿಂಬಿಸಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರಿಂದ ತಲೆಮರೆಸಿಕೊಂಡಿದ್ದ ವೇಳೆ ಐಟಿಗೆ ಪತ್ರ ಬರೆದಿದ್ದು, ಇದು ಸೆಪ್ಟೆಂಬರ್ 8 ರಿಂದ 12ರ ನಡುವೆ ಬರೆದಿರುವ ಪತ್ರ ಎನ್ನಲಾಗುತ್ತಿದೆ.

ಪತ್ರದಲ್ಲಿ ರಹಸ್ಯ ವರದಿ ಮಾಡಿ ಅವ್ಯವಹಾರ ಬಯಲಿಗೆಳೆಯುತ್ತಿದ್ದೇನೆ. ಬಿಜೆಪಿ ಟಿಕೆಟ್ ಪಡೆವ ಕಸರತ್ತು ಕುರಿತು ಪತ್ರದಲ್ಲಿ ಹೇಳಿದ್ದಾರೆ. ತಾನೊಬ್ಬ ಪ್ರತಿಷ್ಠಿತ ಮಾಧ್ಯಮದ ಪತ್ರಕರ್ತೆ ಎಂದು ಉಲ್ಲೇಖಿಸಿದ್ದು, ಗೋವಿಂದ ಬಾಬು ಪೂಜಾರಿ ಮೇಲೆ ಹಣದ ವ್ಯವಹಾರ ಮತ್ತು ಮೋಸಗಾರರ ಪಟ್ಟ ಹೊರಿಸಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನು ಚೈತ್ರಾ ಬರೆದ ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರು ಉಲ್ಲೇಖಿಸಿದ್ದಾಳೆ. ಈ ವಿಚಾರದ ಬಗ್ಗೆ ಸ್ಪಷ್ಟಣೆ ಕೊಟ್ಟ ರಾಜಶೇಖರಾನಂದ ಸ್ವಾಮೀಜಿ ನನಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಜುಲೈನಲ್ಲಿ ಹಿಂದೂ ಮುಖಂಡ ಸತ್ಯಜಿತ್‌ ಸುರತ್ಕಲ್ ಕರೆ ಮಾಡಿದ್ದರು. ಗೋವಿಂದ ಪೂಜಾರಿ ಟಿಕೆಟ್ ವಿಚಾರದಲ್ಲಿ ಪ್ರಶ್ನೆ ಮಾಡಿದ್ದರು. ನನಗೇನೂ ತಿಳಿದಿರಲಿಲ್ಲ, ಚೈತ್ರಾ, ಹಾಲಶ್ರೀ ಹೆಸರಿದೆ ಎಂದಿದ್ದರು.

ಈ ಹಿನ್ನೆಲೆಯಲ್ಲಿ ನಾನು ಚಕ್ರವರ್ತಿ ಸೂಲಿಬೆಲೆಗೆ ಫೋನ್ ಮಾಡಿ ವಿಚಾರಿಸಿದ್ದೆ. ಸೂಲಿಬೆಲೆಗೆ ವಿಚಾರ ತಿಳಿಸಿದಾಗ ಅವರು ವಿಷಯವನ್ನು ಸಿಟಿ ರವಿ ಅವರಿಗೆ ತಿಳಿಸುತ್ತೇನೆ ಎಂದಿದ್ದರು. ಸರಿ ಹಾಗೆ ಮಾಡಿ ಇಲ್ಲದಿದ್ದರೆ ಸಂಘಟನೆಗೆ ಕೆಟ್ಟ ಹೆಸರು ಬರುತ್ತದೆ ಎಂದು ನಾವು ಹೇಳಿದೇವು. ನಂತರ ನಾನು ಚೈತ್ರ ಕುಂದಾಪುರ ಅವರಿಗೆ ಫೋನ್ ಮಾಡಿದೆ. ಫೋನ್ ಮಾಡಿದ ಕೂಡಲೇ ಅವರು ಸ್ವೀಕರಿಸಿದರು. ನಾನು ಆಗ ಹೇಳಿದೆ, ನಿಮಗೆ ಗೋವಿಂದ ಬಾಬು ಪೂಜಾರಿ ಅವರಿಂದ 3.5 ಕೋಟಿ ಹಣ ಬಂದಿದೆಯಾ ಎಂದು ಪ್ರಶ್ನಿಸಿದೆ. ಅದಕ್ಕೆ ಅವರು ಓ ಮೂರೂವರೆ ಕೋಟಿಗೆ ಬಂತಾ? ಎಂದು ನನಗೇ ಕೇಳಿದರು.

ಹಿಂದೆ ಎರಡೂವರೆ ಕೂಟಿ ಇತ್ತು. ಈಗ ಮೂರುವರೇ, ಮುಂದೆ ನಾಲ್ಕು, ಆಮೇಲೆ 7 ಹೀಗೆ ಅದು ಹೋಗುತ್ತಿರುತ್ತದೆ ಎಂದು ನನ್ನ ಹತ್ತಿರ ಹೇಳಿದರು. ಅದಕ್ಕೆ ನಾನು, ಸಿಟ್ಟಿನಿಂದ ಹೇಳಿದಾಗ ಇದಕ್ಕೂ ನನಗೂ ಸಂಬಂಧ ಇಲ್ಲ. ಗೋವಿಂದ ಬಾಬು ಪೂಜಾರಿ ಮನೆ ಕಟ್ಟುವ ಸಂದರ್ಭದಲ್ಲಿ ಒಬ್ಬ ಸ್ವಾಮೀಜಿ ಬೇಕು ಎಂದು ಹೇಳಿದ್ದರು. ಆಗ ನಾನು ಅವರಿಗೆ ಹಾಲಸ್ವಾಮೀಜಿಗಳನ್ನು ಪರಿಚಯ ಮಾಡಿಕೊಟ್ಟಿದ್ದೆ. ಅವರಿಬ್ಬರ ಮಧ್ಯೆ ಏನು ನಡೆದಿದೆಯೋ ನನಗೆ ಗೊತ್ತಿಲ್ಲ ಎಂದಿದ್ದಳು.

ಚೈತ್ರಾ ಪರಿಚಯ ಇದ್ದದ್ದು ನಿಜ, ಆದ್ರೆ ಹಣದ ವಹಿವಾಟು ಇಲ್ಲ. ಇದರಲ್ಲಿ ನಮ್ಮ ಹೆಸರು ಬಂದಾಗ ನಾವು ಚೈತ್ರಾ ಕುಂದಾಪುರಗೆ ಕರೆ ಮಾಡಿದ್ದು ನಿಜ. ಇದರಲ್ಲಿ ನಮ್ಮ ಪಾತ್ರ. ನಮ್ಮ ಹಿಂದೂ ಸಂಘಟನೆಗೆ ಕೆಟ್ಟ ಹೆಸರು ಬರುತ್ತದೆ. ಅದೆಲ್ಲ ನಡೆಯಬಾರದು ಎಂದು ತಿಳಿದುಕೊಳ್ಳಲು ನಾವು ಫೋನ್ ಮಾಡಿದ್ದೇವೆಯೋ ಹೊರೆತು, ಇದರಲ್ಲಿ ನಮ್ಮದು ಎಳ್ಳಷ್ಟೂ ಪಾತ್ರವಿಲ್ಲ ಎಂದು ಮಂಗಳೂರಿನಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!