ಜನ ಮನದ ನಾಡಿ ಮಿಡಿತ

Advertisement

ಜೇಸಿ ಸಪ್ತಾಹ 2023-ಚೈತ್ರ ಸಮಾರೋಪ ; ಪ್ರಭಾತ್ ಬಲ್ನಾಡು ಮತ್ತು ಮಾಕ್೯ ಮೆಂಡೋನ್ಸಾರಿಗೆ ಕಮಲಪತ್ರ ಪ್ರದಾನ

ಮೂಡಬಿದಿರೆ :ಜೇಸಿಐ ಮೂಡುಬಿದಿರೆ ತ್ರಿಭುವನ್ ಇದರ ವತಿಯಿಂದ ಜೇಸಿ ಸಪ್ತಾಹದಂಗವಾಗಿ 7 ದಿನಗಳ ಕಾಲ ನಡೆದ ವಿವಿಧ ಕಾರ್ಯಗಳು ನಿಶ್ಮಿತಾ ಟವರ್ಸ್ ನ ಪ್ಯಾರಾಡೈಸ್ ಹಾಲ್ ನಲ್ಲಿ ಸಮಾರೋಪಗೊಂಡಿತು.


ಜೇಸಿಐ ಅಧ್ಯಕ್ಷ ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೇಸಿ ಪ್ರಭಾತ್ ಬಲ್ನಾಡು ಮತ್ತು ಮಾರ್ಕ್ ಮೆಂಡೊನ್ಸಾ ಇವರಿಗೆ ಕಮಲ ಪತ್ರ ನೀಡಿ ಗೌರವಿಸಲಾಯಿತು.

ರೋಟರಿ ಕ್ಲಬ್ ನ ಅಧ್ಯಕ್ಷ ನಾಗರಾಜ ಬಿ.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಜೇಸಿ ಸಂಸ್ಥೆಯು ಉತ್ತಮ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳನ್ನು ಗುರುತಿಸಿ ಗೌರವಿಸುವ ಮೂಲಕ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಸಂಸ್ಥೆಯೂ ಮುಂದೆಯೂ ತರಬೇತಿಗಳನ್ನು ನೀಡುವ ಮೂಲಕ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಜೇಸಿಯ ಪೂರ್ವಾಧ್ಯಕ್ಷ ಅಬುಲ್ ಅಲಾ ಪುತ್ತಿಗೆ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಯುವ ಜನಾಂಗವು ಇಂದು ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇಂತಹ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಸರಿದಾರಿಗೆ ತರುವಂತಹ ಕೆಲಸಗಳಾಗಬೇಕಿದೆ. ಜೇಸಿ ಸಂಸ್ಥೆ ನಮಗೇನು ನೀಡಿದೆ ಎನ್ನುವುದಕ್ಕಿಂತಲೂ ನಾವು ನಮ್ಮನ್ನು ಅದರಲ್ಲಿ ಯಾವ ರೀತಿ ತೊಡಗಿಸಿಕೊಂಡಿದ್ದೇವೆ ಎನ್ನುವುದು ಮುಖ್ಯ. ನಾವು ಸಂಪೂರ್ಣವಾಗಿ ಅದರಲ್ಲಿ ತೊಡಗಿಸಿಕೊಂಡರೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಲು ಸಾಧ್ಯವಿದೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಯಶೋಧ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೀತಾರಾಮ ಆಚಾರ್ಯ, ಸಮಾಜ ಸೇವೆಯಲ್ಲಿ ಪುರಂದರ ಆರ್. ದೇವಾಡಿಗ, ತುಳು ರಂಗಭೂಮಿ ಕ್ಷೇತ್ರದಲ್ಲಿ ಉಮೇಶ್ ಮಿಜಾರ್ ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಸಮಾಜ ಸೇವಾ ಕಾರ್ಯಕ್ರಮಗಳನ್ನು ಗುರುತಿಸಿ ವೇಣೂರು ಕ್ರಿಸ್ತರಾಜ ನವಚೇತನ ಸ್ಕೂಲ್, ಪವರ್ ಫ್ರೆಂಡ್ಸ್ ಬೆದ್ರ, ನವಚೇತನ ಸೇವಾ ಬಳಗ(ರಿ.) ತೋಡಾರು, ಮೂಡುಬಿದಿರೆ ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಸಂಸ್ಥೆಯನ್ನು ಗೌರವಿಸಲಾಯಿತು.
ಜೇಸಿ ಶ್ರವಣ್ ಮತ್ತು ಜೇಸಿ ಫರಾಜ್ ಬೆದ್ರ ಅವರಿಗೆ ಘಟಕದ ವತಿಯಿಂದ ‘ಕ್ರಿಯಾಶೀಲ ಯುವ ವ್ಯಕ್ತಿ’ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಇನ್ನೂ ಈ ಸಂದರ್ಭದಲ್ಲಿ ಜೇಸಿ ಅನಂತವೀರ್ ಜೈನ್, ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷ ಮಹಮ್ಮದ್ ಆರೀಫ್, ಐಪಿಪಿ ಶಾಂತಲಾ ಎಸ್.ಆಚಾರ್ಯ, ಮಹಿಳಾ ಜೇಸಿ ಸಂಯೋಜಕಿ ಮಲ್ಲಿಕಾ, ಕಾರ್ಯದರ್ಶಿ ಆಶ್ರಿತಾ ಎಸ್.ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!