ಮೂಡಬಿದಿರೆ :ಜೇಸಿಐ ಮೂಡುಬಿದಿರೆ ತ್ರಿಭುವನ್ ಇದರ ವತಿಯಿಂದ ಜೇಸಿ ಸಪ್ತಾಹದಂಗವಾಗಿ 7 ದಿನಗಳ ಕಾಲ ನಡೆದ ವಿವಿಧ ಕಾರ್ಯಗಳು ನಿಶ್ಮಿತಾ ಟವರ್ಸ್ ನ ಪ್ಯಾರಾಡೈಸ್ ಹಾಲ್ ನಲ್ಲಿ ಸಮಾರೋಪಗೊಂಡಿತು.
ಜೇಸಿಐ ಅಧ್ಯಕ್ಷ ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೇಸಿ ಪ್ರಭಾತ್ ಬಲ್ನಾಡು ಮತ್ತು ಮಾರ್ಕ್ ಮೆಂಡೊನ್ಸಾ ಇವರಿಗೆ ಕಮಲ ಪತ್ರ ನೀಡಿ ಗೌರವಿಸಲಾಯಿತು.
ರೋಟರಿ ಕ್ಲಬ್ ನ ಅಧ್ಯಕ್ಷ ನಾಗರಾಜ ಬಿ.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಜೇಸಿ ಸಂಸ್ಥೆಯು ಉತ್ತಮ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳನ್ನು ಗುರುತಿಸಿ ಗೌರವಿಸುವ ಮೂಲಕ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಸಂಸ್ಥೆಯೂ ಮುಂದೆಯೂ ತರಬೇತಿಗಳನ್ನು ನೀಡುವ ಮೂಲಕ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.
ಜೇಸಿಯ ಪೂರ್ವಾಧ್ಯಕ್ಷ ಅಬುಲ್ ಅಲಾ ಪುತ್ತಿಗೆ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಯುವ ಜನಾಂಗವು ಇಂದು ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇಂತಹ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಸರಿದಾರಿಗೆ ತರುವಂತಹ ಕೆಲಸಗಳಾಗಬೇಕಿದೆ. ಜೇಸಿ ಸಂಸ್ಥೆ ನಮಗೇನು ನೀಡಿದೆ ಎನ್ನುವುದಕ್ಕಿಂತಲೂ ನಾವು ನಮ್ಮನ್ನು ಅದರಲ್ಲಿ ಯಾವ ರೀತಿ ತೊಡಗಿಸಿಕೊಂಡಿದ್ದೇವೆ ಎನ್ನುವುದು ಮುಖ್ಯ. ನಾವು ಸಂಪೂರ್ಣವಾಗಿ ಅದರಲ್ಲಿ ತೊಡಗಿಸಿಕೊಂಡರೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಲು ಸಾಧ್ಯವಿದೆ ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಯಶೋಧ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೀತಾರಾಮ ಆಚಾರ್ಯ, ಸಮಾಜ ಸೇವೆಯಲ್ಲಿ ಪುರಂದರ ಆರ್. ದೇವಾಡಿಗ, ತುಳು ರಂಗಭೂಮಿ ಕ್ಷೇತ್ರದಲ್ಲಿ ಉಮೇಶ್ ಮಿಜಾರ್ ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ಸಮಾಜ ಸೇವಾ ಕಾರ್ಯಕ್ರಮಗಳನ್ನು ಗುರುತಿಸಿ ವೇಣೂರು ಕ್ರಿಸ್ತರಾಜ ನವಚೇತನ ಸ್ಕೂಲ್, ಪವರ್ ಫ್ರೆಂಡ್ಸ್ ಬೆದ್ರ, ನವಚೇತನ ಸೇವಾ ಬಳಗ(ರಿ.) ತೋಡಾರು, ಮೂಡುಬಿದಿರೆ ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಸಂಸ್ಥೆಯನ್ನು ಗೌರವಿಸಲಾಯಿತು.
ಜೇಸಿ ಶ್ರವಣ್ ಮತ್ತು ಜೇಸಿ ಫರಾಜ್ ಬೆದ್ರ ಅವರಿಗೆ ಘಟಕದ ವತಿಯಿಂದ ‘ಕ್ರಿಯಾಶೀಲ ಯುವ ವ್ಯಕ್ತಿ’ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಇನ್ನೂ ಈ ಸಂದರ್ಭದಲ್ಲಿ ಜೇಸಿ ಅನಂತವೀರ್ ಜೈನ್, ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷ ಮಹಮ್ಮದ್ ಆರೀಫ್, ಐಪಿಪಿ ಶಾಂತಲಾ ಎಸ್.ಆಚಾರ್ಯ, ಮಹಿಳಾ ಜೇಸಿ ಸಂಯೋಜಕಿ ಮಲ್ಲಿಕಾ, ಕಾರ್ಯದರ್ಶಿ ಆಶ್ರಿತಾ ಎಸ್.ಶೆಟ್ಟಿ ಉಪಸ್ಥಿತರಿದ್ದರು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…