ಕರಾವಳಿ

ರಾತ್ರಿ 10 ಗಂಟೆಗೆ ಮೊದಲು ಗಣೇಶೋತ್ಸವದ ಮೆರವಣಿಗೆ ಮುಕ್ತಾಯಗೊಳಿಸಿ; ಸಬ್ ಇನ್ಸ್‌ ಪೆಕ್ಟರ್‌ ಆಂಜನೇಯ ರೆಡ್ಡಿ

ಪುತ್ತೂರು: ಸಾರ್ವಜನಿಕ ಗಣೇಶೋತ್ಸವಗಳನ್ನು ನಡೆಸುವ ಸಂದರ್ಭದಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತ ಗಣೇಶೋತ್ಸವ ನಡೆಸಲು ಆಯಾ ಸಮಿತಿಯರು ಜವಾಬ್ದಾರಿ ವಹಿಸಬೇಕು ಎಂದು ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ ಪೆಕ್ಟರ್‌ ಆಂಜನೇಯ ರೆಡ್ಡಿ ಹೇಳಿದರು.

ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಗಣೇಶೋತ್ಸವ ನಡೆಸುವ ಕಡೆಗಳಲ್ಲಿ ಬೆಂಕಿ ನಂದಿಸುವ ವ್ಯವಸ್ಥೆ ಇರಬೇಕು. ಪೆಂಡಾಲ್ ಸುರಕ್ಷತೆಯೊಂದಿಗೆ ಸಮರ್ಪಕ ಬೆಳಕಿನ ವ್ಯವಸ್ಥೆ, ಜನರೇಟರ್ ವ್ಯವಸ್ಥೆ ಇರಬೇಕು. ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ಹೇಳಿದರು.

ಈ ಬಾರಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ನೇರವಾಗಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಂದಲೇ ನೇರ ಸೂಚನೆಗಳು ಬಂದಿವೆ. ರಾತ್ರಿ 10 ಗಂಟೆಗೆ ಮೊದಲು ಗಣೇಶೋತ್ಸವದ ಮೆರವಣಿಗೆ ಮುಕ್ತಾಯವಾಗಬೇಕು. ರಾತ್ರಿ10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ಅವಧಿಯಲ್ಲಿ ಸೌಂಡ್ ಬಳಕೆಯಾಗದಂತೆ ಸರ್ವೋಚ್ಛ ನ್ಯಾಯಾಲಯದ ನಿಯಮವನ್ನು ಪಾಲಿಸಬೇಕು ಎಂದು ಹೇಳಿದರು.

ಆದಷ್ಟು ಡಿಜೆಗಳನ್ನು ಬಳಸಬೇಡಿ. ಇಡೀ ರಾಜ್ಯದಲ್ಲಿಯೇ ದ.ಕ. ಜಿಲ್ಲೆಯಲ್ಲಿ ರೀತಿ-ನೀತಿ, ಕಾನೂನುಗಳನ್ನು ಪಾಲಿಸುವ ಜನರಿದ್ದಾರೆ. ಆಡಂಬರಕ್ಕಿಂತ ಭಕ್ತಿ, ಪ್ರೀತಿಯಿಂದ ದೇವರ ಸೇವೆ ಮಾಡಿದರೆ ಅದರ ಫಲವೂ ಲಭಿಸುತ್ತದೆ. ಈ ಕಾರಣದಿಂದ ನಿಯಮಗಳ ಪಾಲನೆಯೊಂದಿಗೆ ಶಾಂತಿಯುತ ಗಣೇಶೋತ್ಸವ, ಮೆರವಣಿಗೆಗೆ ಆದ್ಯತೆ ನೀಡಬೇಕು ಎಂದು ಆಂಜನೇಯ ರೆಡ್ಡಿ ವಿನಂತಿಸಿದರು.

ಸಬ್ ಇನ್ಸ್‌ ಪೆಕ್ಟರ್‌ ಸೇಸಮ್ಮ ನಿಯಮಾವಳಿಗಳ ಕುರಿತು ಮಾಹಿತಿ ನೀಡಿದರು. ನಗರ ಠಾಣಾ ವ್ಯಾಪ್ತಿಯ 15 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ.

ನಗರ ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಪ್ರಮುಖರಾದ ದೇವಾನಂದ ಕೆ., ಕುಮಾರನಾಥ್, ಕೇಶವ ಭಂಡಾರಿ, ರಾಧಾಕೃಷ್ಣ ನಂದಿಲ, ರಾಜೇಶ್ ಬನ್ನೂರು, ಸುದೇಶ್ ಚಿಕ್ಕಪುತ್ತೂರು, ಯು.ಲೋಕೇಶ್ ಹೆಗ್ಡೆ, ಪಿ.ವಿ. ದಿನೇಶ್, ಪ್ರಕಾಶ್, ಎಚ್. ಉದಯ ಮೊದಲಾದವರು ಪಾಲ್ಗೊಂಡರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…

9 hours ago

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…

9 hours ago

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…

9 hours ago

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…

9 hours ago

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…

9 hours ago

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…

10 hours ago