ಪುತ್ತೂರು: ಸಾರ್ವಜನಿಕ ಗಣೇಶೋತ್ಸವಗಳನ್ನು ನಡೆಸುವ ಸಂದರ್ಭದಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತ ಗಣೇಶೋತ್ಸವ ನಡೆಸಲು ಆಯಾ ಸಮಿತಿಯರು ಜವಾಬ್ದಾರಿ ವಹಿಸಬೇಕು ಎಂದು ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಂಜನೇಯ ರೆಡ್ಡಿ ಹೇಳಿದರು.
ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಗಣೇಶೋತ್ಸವ ನಡೆಸುವ ಕಡೆಗಳಲ್ಲಿ ಬೆಂಕಿ ನಂದಿಸುವ ವ್ಯವಸ್ಥೆ ಇರಬೇಕು. ಪೆಂಡಾಲ್ ಸುರಕ್ಷತೆಯೊಂದಿಗೆ ಸಮರ್ಪಕ ಬೆಳಕಿನ ವ್ಯವಸ್ಥೆ, ಜನರೇಟರ್ ವ್ಯವಸ್ಥೆ ಇರಬೇಕು. ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ಹೇಳಿದರು.
ಈ ಬಾರಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ನೇರವಾಗಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಂದಲೇ ನೇರ ಸೂಚನೆಗಳು ಬಂದಿವೆ. ರಾತ್ರಿ 10 ಗಂಟೆಗೆ ಮೊದಲು ಗಣೇಶೋತ್ಸವದ ಮೆರವಣಿಗೆ ಮುಕ್ತಾಯವಾಗಬೇಕು. ರಾತ್ರಿ10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ಅವಧಿಯಲ್ಲಿ ಸೌಂಡ್ ಬಳಕೆಯಾಗದಂತೆ ಸರ್ವೋಚ್ಛ ನ್ಯಾಯಾಲಯದ ನಿಯಮವನ್ನು ಪಾಲಿಸಬೇಕು ಎಂದು ಹೇಳಿದರು.
ಆದಷ್ಟು ಡಿಜೆಗಳನ್ನು ಬಳಸಬೇಡಿ. ಇಡೀ ರಾಜ್ಯದಲ್ಲಿಯೇ ದ.ಕ. ಜಿಲ್ಲೆಯಲ್ಲಿ ರೀತಿ-ನೀತಿ, ಕಾನೂನುಗಳನ್ನು ಪಾಲಿಸುವ ಜನರಿದ್ದಾರೆ. ಆಡಂಬರಕ್ಕಿಂತ ಭಕ್ತಿ, ಪ್ರೀತಿಯಿಂದ ದೇವರ ಸೇವೆ ಮಾಡಿದರೆ ಅದರ ಫಲವೂ ಲಭಿಸುತ್ತದೆ. ಈ ಕಾರಣದಿಂದ ನಿಯಮಗಳ ಪಾಲನೆಯೊಂದಿಗೆ ಶಾಂತಿಯುತ ಗಣೇಶೋತ್ಸವ, ಮೆರವಣಿಗೆಗೆ ಆದ್ಯತೆ ನೀಡಬೇಕು ಎಂದು ಆಂಜನೇಯ ರೆಡ್ಡಿ ವಿನಂತಿಸಿದರು.
ಸಬ್ ಇನ್ಸ್ ಪೆಕ್ಟರ್ ಸೇಸಮ್ಮ ನಿಯಮಾವಳಿಗಳ ಕುರಿತು ಮಾಹಿತಿ ನೀಡಿದರು. ನಗರ ಠಾಣಾ ವ್ಯಾಪ್ತಿಯ 15 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ.
ನಗರ ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಪ್ರಮುಖರಾದ ದೇವಾನಂದ ಕೆ., ಕುಮಾರನಾಥ್, ಕೇಶವ ಭಂಡಾರಿ, ರಾಧಾಕೃಷ್ಣ ನಂದಿಲ, ರಾಜೇಶ್ ಬನ್ನೂರು, ಸುದೇಶ್ ಚಿಕ್ಕಪುತ್ತೂರು, ಯು.ಲೋಕೇಶ್ ಹೆಗ್ಡೆ, ಪಿ.ವಿ. ದಿನೇಶ್, ಪ್ರಕಾಶ್, ಎಚ್. ಉದಯ ಮೊದಲಾದವರು ಪಾಲ್ಗೊಂಡರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…