ಜನ ಮನದ ನಾಡಿ ಮಿಡಿತ

Advertisement

ಸಿನಿರಸಿಕರನ್ನು ತನ್ನತ್ತ ಸೆಳೆಯಲು ಸೆ. 22ರಂದು ತೆರೆಗೆ ಅಪ್ಪಳಿಸಲಿದೆ “ಯಾನ್ ಸೂಪರ್ ಸ್ಟಾರ್” ತುಳು ಚಲನಚಿತ್ರ

ಪುತ್ತೂರು; ಆನಂದ ಫಿಲಂಸ್ ಮತ್ತು ದ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ಟಿವಿ ಮಾದ್ಯಮದಲ್ಲಿ ಸಿಐಡಿ

ಧಾರವಾಹಿಯ ಮೂಲಕ ಎಲ್ಲರಿಗೂ ಚಿರಪರಿಚಿತರಾಗಿರುವ ಮುಂಬಯಿಯಲ್ಲಿರುವ ಕಾರ್ಕಳ ಮೂಲದ ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಲನ ಚಿತ್ರವು ಸೆ. 22ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಯಾನಂದ ಶೆಟ್ಟಿಯವರು ಮಾತನಾಡಿ ‘ಯಾನ್ ಸೂಪರ್ ಸ್ಟಾರ್’ ಸಿನಿಮಾ ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರ, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್ ಸಹಿತ ಜಿಲ್ಲೆಯಾದ್ಯಂತ ಚಿತ್ರಮಂದಿರದಲ್ಲಿ ಸಿನಿಮಾ ತೆರೆ ಕಾಣಲಿದೆ. ತುಳು ಸಿನಿಮಾರಂಗಕ್ಕೆ ಯಾನ್ ಸೂಪರ್ ಸ್ಟಾರ್ ಮೂಲಕ ಒಂದು ಸದಭಿರುಚಿಯ ಚಿತ್ರ ಲಭಿಸಲಿದೆ. ಕುಟುಂಬ ಸಮೇತ ಸಿನಿಮಾ ವೀಕ್ಷಿಸ ಬಹುದಾಗಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ. ಈಗಾಗಲೇ ಮುಂಬಯಿ, ಪೂನಾ ಮತ್ತಿತರ ಕಡೆಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದ್ದು, ಪ್ರೇಕ್ಷಕರಿಂದ ವ್ಯಾಪಕ ಮೆಚ್ಚುಗೆ ಪಡೆದುಕೊಂಡಿದೆ. ಬೆಂಗಳೂರು ಮತ್ತು ಗಲ್ಫ್ ದೇಶಗಳಲ್ಲೂ ಸಿನಿಮಾ ಬಿಡುಗಡೆಗೆ ತಯಾರಿ ನಡೆಯುತ್ತಿದೆ ಎಂದ ಅವರು ಹೊಸ ಜನರೇಶನ್‌ಗೆ ಉತ್ತಮ ಸಂದೇಶ ಕೊಡುವ ಚಿತ್ರವಾಗಿದ್ದು, ಕನ್ನಡ ಮತ್ತು ಹಿಂದಿಯಲ್ಲೂ ಈ ಚಿತ್ರ ತೆರೆಕಾಣಲಿದೆ ಎಂದು ಅವರು ಹೇಳಿದರು.

ಚಿತ್ರದಲ್ಲಿ ಪ್ರಮುಖವಾಗಿ ಜನಮನ್ನಣೆ ಪಡೆದಿರುವ ಸಿಐಡಿ ಧಾರಾವಾಹಿಯ ಮುಂಬಯಿ ಕಲಾವಿದರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಲ್ ರೊಂದಿಗೆ ತುಳುನಾಡಿನ ಖ್ಯಾತ ಕಲಾವಿದರಾದ ಕುಸೇಲ್ದರಸೆ ನವೀನ್ ಡಿ ಪಡೀಲ್, ನವರಸ ರಾಜೆ ಭೋಜರಾಜ ವಾಮಂಜೂರು, ಕಾಂತರ ಚಲನಚಿತ್ರದಲ್ಲಿ ಉತ್ತಮ ಪಾತ್ರ ನಿಭಾಯಿಸಿದ ಮಾನಸಿ ಸುಧೀರ್, ಅನುಷಾ, ಅಶೋಕ್ ಪಕ್ಕಳ, ಮಾಸ್ಟರ್ ಅತಿಶ್ ಶೆಟ್ಟಿ, ಮಾಸ್ಟರ್ ಅರುಷ್ ಯು ಪೂಜಾರಿ, ಕುಮಾರಿ ಶ್ರೀಯಾ ಹೆಗ್ಡೆ ಮೊದಲಾದವರು ತಾರಾಗಣದಲ್ಲಿದ್ದಾರೆ.

ಸಂತೋಷ್ ಶೆಟ್ಟಿಯವರ ಕತೆಗೆ ಸಚಿನ್ ಶೆಟ್ಟಿ ಕುಂಬಳೆ ಸಂಭಾಷಣೆ ಬರೆದಿದ್ದಾರೆ. ಚಿತ್ರಕತೆಯನ್ನು ಅಂಕಣ ಜೋಷಿ, ಸಂತೋಷ್ ಶೆಟ್ಟಿ, ಸಾಹಿತ್ಯ ಹಾಡು, ಸಂಗೀತದಲ್ಲಿ ವಿ ಮನೋಹರ್, ಗುರುಕಿರಣ್ ಈ ಸಿನಿಮಾಕ್ಕೆ ಹಾಡು ಹಾಡಿದ್ದಾರೆ. ಹಿನ್ನಲೆ ಸಂಗೀತವನ್ನು ಸಂಜಯ್ ವಾಂದ್ರೇಕರ್, ಕ್ಯಾಮರಾದಲ್ಲಿ ಕೃಷ್ಣರಾಜ್ ಕೋಟ್ಯಾನ್, ಸಾಹಸದಲ್ಲಿ ಆನಂದ ಶೆಟ್ಟಿ, ಸಹ ನಿರ್ದೇಶನ ರಾಮ್ ದಾಸ್ ಸಸಿಹಿತ್ಲು, ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ಸತೀಶ್ ದುಬೈ, ಕ್ರಿಯೇಟಿವ್ ಡೈರಕ್ಟರ್ ಆಗಿ ಕ್ರಿಸ್ತಬೆಲ್ಲೆ ಡಿ ಸೋಜ, ಪ್ರೊಡಕ್ಷನ್ ಹೆಡ್ಡ್ : ಚಂದ್ರಕಾಂತ್ ಭಂಡಾರಿ, ನಿರ್ದೇಶನವನ್ನು ಸಂತೋಷ್ ಶೆಟ್ಟಿ ಮಾಡಿದ್ದಾರೆ.

ಇನ್ನೂ ಸುದ್ದಿಗೋಷ್ಠಿಯಲ್ಲಿ ಚಿತ್ರ ನಟ ಉದ್ಯಮಿ ಹರೀಶ್ ವಾಸು ಶೆಟ್ಟಿ, ನಿರ್ದೇಶಕ ಸಂತೋಷ್ ಶೆಟ್ಟಿ, ಚಿತ್ರದ ಕ್ಯಾಮರಮ್ಯಾನ್ ಕೃಷ್ಣರಾಜ್ ಕೋಟ್ಯಾನ್, ಚಲನಚಿತ್ರ ಹಂಚಿಕೆದಾರ ಬಾಲಕೃಷ್ಣ ರೈ ಕುಕ್ಕಾಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!