ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅಕ್ಟೋಬರ್ 28 ಮತ್ತು 29 ರಂದು ವಿಶ್ವ ಬಂಟರ ಸಮ್ಮೇಳನ ನಡೆಯಲಿದ್ದು, ಬಂಟ ಸಮುದಾಯದ ಸ್ವಾಮೀಜಿಗಳು ಒಂದೇ ವೇದಿಕೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಶುಭಕೋರಲಿದ್ದಾರೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಈಗಾಗಲೇ ಎಲ್ಲಾ ಬಂಟ ಸಮುದಾಯದ ಸ್ವಾಮೀಜಿಗಳನ್ನು ಕಾರ್ಯಕ್ರಮಕ್ಕೆ ಬರುವಂತೆ ಆಮಂತ್ರಿಸಿದ್ದಾರೆ. ಒಕ್ಕೂಟದಿಂದ ದಿನಾಂಕ 28.10.2023 ಮತ್ತು 29.10.2023 ರಂದು ಉಡುಪಿಯಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಜರಗಲಿದ್ದು, ಸಮಾರಂಭದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಬಂಟ ಸಮುದಾಯ ಒಂದೇ ಸೂರಿನಡಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜಕಾರಣಿಗಳು, ಸಿನಿಮಾ ತಾರೆಯರು ಹೀಗೆ ಎಲ್ಲಾ ವರ್ಗದ ಜನರು ಒಂದೆಡೆ ಸೇರುವ ಅಪರೂಪದ ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ದತ್ತ ಸಂಸ್ಥಾನ ಒಡಿಯೂರಿನ ಗುರು ದೇವಾನಂದ ಸ್ವಾಮೀಜಿ, ಬಾರ್ಕೂರು ಮಹಾ ಸಂಸ್ಥಾನ ಭಾರ್ಗವ ಬೀಡುವಿನ ವಿದ್ಯಾವಚಾಸ್ಪತಿ ಶ್ರೀ ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ, ಗುರುಪುರ ಶ್ರೀ ವಜ್ರದೇಹಿ ಮಠದ ಸ್ವಾಮೀಜಿ ಶ್ರೀ ರಾಜಶೇಖಾರನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಕೇಮಾರ್ ಸಂದೀಪನಿಯ ಶ್ರೀ ಈಶ ವಿಠಲದಾಸ ಸ್ವಾಮೀಜಿ ಭಾಗವಹಿಸಲಿದ್ದಾರೆ



